ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ತಾಜಮಹಲ್, ಕೆಂಪುಕೋಟೆ, ಇಡೀ ದೇಶ ವಕ್ಫ್ ಆಸ್ತಿ ಎಂದು ಘೋಷಿಸಿ: ಕೋರ್ಟ್ ಛಿಮಾರಿ

ಜಾಬಲಾಪುರ: ಮಧ್ಯಪ್ರದೇಶದ ಬುರಹಾನಪುರ ಜಿಲ್ಲೆಯ ಕೆಲವು ಪ್ರಸಿದ್ಧ ಸ್ಮಾರಕಗಳು ತನಗೆ ಎಂದು ರಾಜ್ಯದ ವಕ್ಫ್ ಮಂಡಳಿ 11 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಗೊಳಿಸಿದೆ. ಆ ಸ್ಥಳಗಳಿಂದ ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿದೆ.

ಪ್ರಕರಣದ ವಿಚಾರಣೆ ವೇಳೆ ವಕ್ಫ್ ಮಂಡಳಿಯ ವಕೀಲರ ವಿರುದ್ಧ ಹರಿಹಾಯ್ದ ನ್ಯಾಯಪೀಠ, ‘ತಾಜ್ ಮಹಲ್, ಕೆಂಪುಕೋಟೆಯನ್ನೂ ವಕ್ಫ್ ಆಸ್ತಿ ಎಂದು ಘೋಷಿಸಿಬಿಡಿ. ನಿಮಗೆ ಮನಸ್ಸಿಗೆ ಬಂದಾಗ ಯಾವುದೇ ಆಸ್ತಿ ನಮ್ಮದೆಂದು ಘೋಷಿಸಿ ಬಿಡುತ್ತೀರಿ. ನಾಳೆ ನೀವು ಇಡೀ ದೇಶ ವಕ್ಫ್ ಆಸ್ತಿ ಎನ್ನುತ್ತೀರಿ. ಆಗ ಏನು ಮಾಡುವುದು? ನೀವು ಘೋಷಣೆ ಮಾಡಿ ಆಸ್ತಿ ನಮ್ಮದು ಎನ್ನುತ್ತೀರಿ. ಹೀಗೆ ಮಾಡಲು ಬಿಡಲ್ಲ’ ಎಂದು ಕಿಡಿಕಾರಿತು.

ಬುರ್ನಾನಪುರ ಕಟ್ಟೀಯೊಳಗೆ ಇರುವ ಅರಮನೆ, ಶಾ ಶುಜಾ, ನಾಡಿರ್‌ಶಾ ಅವರ ಗೋರಿ ಹಾಗೂ ಬೀಬಿ ಸಾಹೀಬ್ ಮಸೀದಿ ತಮಗೆ ಸೇರಿದ್ದು ಎಂದು 2013ರ ಜುಲೈ 19ರಂದು ಮಧ್ಯಪ್ರದೇಶ ವಕ್ಫ್ ಮಂಡಳಿ ಆದೇಶ ಹೊರಡಿಸಿತ್ತು.

ಇದರ ವಿರುದ್ಧ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸ್ಮಾರಕಗಳು ಕೇಂದ್ರ ಸರ್ಕಾರದ ಆಸ್ತಿಯಾಗಿವೆ. 1904ರ ಪುರಾತನ ಸ್ಮಾರಕ ಸಂರಕ್ಷಣಾ ಕಾಯ್ದೆಯಡಿ ಇವನ್ನು ತಾನು ಸಂರಕ್ಷಣೆ ಮಾಡುತ್ತಿರುವುದಾಗಿ ಪುರಾತತ್ವ ಸರ್ವೇಕ್ಷಣಾ ಇಲಾಖೆ ವಾದಿಸಿತ್ತು. ಈ ವಾದಕ್ಕೆ ಮನ್ನಣೆ ನೀಡಿರುವ ಹೈಕೋರ್ಟ್‌ ನ್ಯಾ। ಜಿ.ಎಸ್. ಆಹ್ಲುವಾಲಿಯಾ ನೇತೃತ್ವದ ಏಕಸದಸ್ಯ ಪೀಠ, ವಕ್ಫ್ ಮಂಡಳಿ ಆದೇಶವನ್ನು ರದ್ದುಗೊಳಿಸಿದೆ.

ಏತನ್ಮಧ್ಯೆ ಇಂದು ವಕ್ಫ್ ಬೋರ್ಡ್ ನ 40 ನಿಯಮಗಳನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಮಸೂದೆ ಮಂಡಿಸಲಿದೆ.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ