ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ (KSAWU) ಬಯೋಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ದೀಪಾ ಕೆ. ಸಿನ್ನೂರ ಅವರಿಗೆ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿ ಗೌರವಿಸಿದೆ.

​​        ಈಚೇಗೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ​ ಬಿಎಲ್ ಡಿಇ  ವಿಶ್ವವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.

          ಇವರು ವಿಜಯಪುರದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅನಾಟಮಿ ಮತ್ತು ಅಲೈಡ್ ಹೆಲ್ತ್ ಸೈನ್ಸ್ (ಹ್ಯೂಮನ್ ಜೆನೆಟಿಕ್ಸ್) ವಿಭಾಗದಲ್ಲಿ “ಜೆನೆಟಿಕ್ ಪಾಲಿಮಾರ್ಫಿಸಂ ಆಫ್ LXR-ಆಲ್ಫಾ ಅಂಡ್ ABCA1 ಜೀನ್ಸ್ ಇನ್ ನಾರ್ತ್ ಕರ್ನಾಟಕ ಪಾಪ್ಯುಲೇಶನ್” (Genetic Polymorphism of LXR-alpha and ABCA1 Genes in North Karnataka Population) ಎಂಬ ವಿಷಯದ ಮೇಲೆ ಸುದೀರ್ಘ ಸಂಶೋಧನೆ ನಡೆಸಿದ್ದರು.

        ಇವರು ಅನಾಟಮಿ ವಿಭಾಗದ ಮುಖ್ಯಸ್ಥರಾದ ಡಾ. ಆರ್. ಎಸ್. ಬುಳಗೌಡ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನಾ ಪ್ರಬಂಧವನ್ನು ಪೂರ್ಣಗೊಳಿಸಿದ್ದಾರೆ.​ವಿಜಯಪುರದಲ್ಲಿ ಕಳೆದ ತಿಂಗಳು ನಡೆದ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಕುಲಾಧಿಪತಿಗಳಾದ  ಬಿ. ಎಂ. ಪಾಟೀಲ ಅವರು ದೀಪಾ ಅವರಿಗೆ ಅಧಿಕೃತವಾಗಿ ಪಿಎಚ್.ಡಿ. ಪದವಿ ಪ್ರದಾನ ಮಾಡಿದರು.

​         ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ, ನವದೆಹಲಿಯ ನ್ಯಾಷನಲ್ ಮೆಡಿಕಲ್ ಕೌನ್ಸಿಲ್‌ನ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ಅಧ್ಯಕ್ಷರಾದ ಪ್ರೊ. ಡಾ. ಎಂ. ಕೆ. ರಮೇಶ್, ಉಪ-ಕುಲಾಧಿಪತಿ ಪ್ರೊ. ಡಾ. ವೈ. ಎಂ. ಜಯರಾಜ್, ಕುಲಪತಿ (ಪ್ರಭಾರ) ಪ್ರೊ. ಡಾ. ಅರುಣ್ ಇನಾಮದಾರ, ಕುಲಸಚಿವ ಪ್ರೊ. ಡಾ. ಆರ್. ವಿ. ಕುಲಕರ್ಣಿ, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ. ಡಾ. ಎಸ್. ಎಸ್. ದೇವರಮನಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

—-

ದೀಪಾ ಸಿನ್ನೂರ ಮುದ್ದೇಬಿಹಾಳ ತಾಲ್ಲೂಕು ಯರಝರಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರೇಮಾಬಾಯಿ ಚವ್ಹಾಣ ಅವರ ಸೊಸೆ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಸಂತೋಷ ಚವ್ಹಾಣ ಅವರ ಪತ್ನಿ.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ