ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಮುದ್ದೇಬಿಹಾಳ : ಕಳೆದ ಒಂದು ವಾರದಿಂದ ತಾಲ್ಲೂಕಿನ ಯರಝರಿ ಗ್ರಾಪಂ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಸಂಚರಿಸುತ್ತಿರುವ ಕಾಡುಪ್ರಾಣಿಯ ಬಗ್ಗೆ ಖಚಿತ ಮಾಹಿತಿ ಹೊರಬಿದ್ದಿದ್ದು ಅದು ಚಿರತೆಯೇ ಎಂದು ದೃಢಪಟ್ಟಿದೆ.

ತಾಲ್ಲೂಕಿನ ಹಂಡರಗಲ್ ಗ್ರಾಮದ ಹಳ್ಳದಲ್ಲಿ ಶನಿವಾರ ಬೆಳಗ್ಗೆ ಕುರಿ ಮೇಯಿಸಲು ಹೋಗಿದ್ದ ಯರಝರಿ ಗ್ರಾಮದ ಕುರಿಗಾಹಿ ಯಲ್ಲಾಲಿಂಗ ವಾಲೀಕಾರ ಎಂಬುವರ ಕಣ್ಣಿಗೆ ಚಿರತೆ ಕಾಣಿಸಿಕೊಂಡಿದೆ. ಇದನ್ನು ಸ್ವತಃ ಯಲ್ಲಾಲಿಂಗ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಕುರಿಗಾಹಿ ಯಲ್ಲಾಲಿಂಗ ಅವರು, ‘ಬೆಳಗ್ಗೆ ಕುರಿಮೇಯಿಸಲು ಹೋದ ವೇಳೆ ಹಳ್ಳದ ಬಳಿ ಚಿರತೆ ಹೋಗಿದ್ದನ್ನು ಕಣ್ಣಾರೆ ಕಂಡಿದ್ದೇನೆ.ಈ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ.ಮಧ್ಯಮ ಗಾತ್ರದಲ್ಲಿ ಚಿರತೆ ಇದೆ’ ಎಂದು ತಿಳಿಸಿದರು.

ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ, ಗ್ರಾಮಸ್ಥರೊಬ್ಬರು ಚಿರತೆ ನೋಡಿದ್ದಾಗಿ ತಿಳಿಸಿದ್ದಾರೆ. ಅದರ ಸೆರೆಗೆ ಎರಡು ಬೋನುಗಳನ್ನು ಹಳ್ಳದ ದಡದಲ್ಲಿ ಇಡಲಾಗುತ್ತಿದೆ.ಚಿರತೆ ಓಡಾಡಿದ ಜಾಗೆ ಅತ್ಯಂತ ಇಕ್ಕಟ್ಟಾಗಿದ್ದು ಮುಳ್ಳುಕಂಟಿಗಳಿಂದ ಆವೃತವಾಗಿದೆ. ಕಾರ್ಯಾಚರಣೆ ಮುಂದುವರೆಸಿದ್ದೇವೆ ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು ಚಿರತೆ ಸೆರೆಗೆ ಕಾರ್ಯಚರಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಕಂದಗನೂರು ಗ್ರಾಮದ ಭಾಗದಲ್ಲಿ ಎರಡು ಜಾನುವಾರುಗಳನ್ನು ಕೊಂದಿದ್ದ ಚಿರತೆ ಇದೀಗ ಸ್ಥಳ ಬದಲಿಸಿ ಓಡಾಡುತ್ತಿರುವುದು ಗ್ರಾಮಸ್ಥರ ನಿದ್ದೆಗಡಿಸಿದೆ.ತಾಲ್ಲೂಕು ಆಡಳಿತ ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿವೆ.

ಕಂದಗನೂರು,ನಾಗರಾಳ, ಚಿರ್ಚನಕಲ್, ಹಂಡರಗಲ್ ಭಾಗದಲ್ಲಿ ರೈತರು ಚಿರತೆ ಭೀತಿಯಿಂದ ಹೊಲಗಳಿಗೆ ತಿರುಗಾಡುವುದನ್ನೇ ಬಿಟ್ಟು ಕೂತಿದ್ದಾರೆ. ಆದಷ್ಟು ಬೇಗ ಚಿರತೆಯನ್ನು ಪತ್ತೆ ಹಚ್ಚಬೇಕು ಎಂದು ಹಂಡರಗಲ್ ಗ್ರಾಮದ ಸಾಹೇಬಗೌಡ ಪಟೇಲ್, ಬಸವರಾಜ ನರಸಣಗಿ, ಮುತ್ತು ಕನ್ನೂರ ಆಗ್ರಹಿಸಿದ್ದಾರೆ.

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ