ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಮುದ್ದೇಬಿಹಾಳ : ಕಳೆದ ಒಂದು ವಾರದಿಂದ ತಾಲ್ಲೂಕಿನ ಯರಝರಿ ಗ್ರಾಪಂ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಸಂಚರಿಸುತ್ತಿರುವ ಕಾಡುಪ್ರಾಣಿಯ ಬಗ್ಗೆ ಖಚಿತ ಮಾಹಿತಿ ಹೊರಬಿದ್ದಿದ್ದು ಅದು ಚಿರತೆಯೇ ಎಂದು ದೃಢಪಟ್ಟಿದೆ.

ತಾಲ್ಲೂಕಿನ ಹಂಡರಗಲ್ ಗ್ರಾಮದ ಹಳ್ಳದಲ್ಲಿ ಶನಿವಾರ ಬೆಳಗ್ಗೆ ಕುರಿ ಮೇಯಿಸಲು ಹೋಗಿದ್ದ ಯರಝರಿ ಗ್ರಾಮದ ಕುರಿಗಾಹಿ ಯಲ್ಲಾಲಿಂಗ ವಾಲೀಕಾರ ಎಂಬುವರ ಕಣ್ಣಿಗೆ ಚಿರತೆ ಕಾಣಿಸಿಕೊಂಡಿದೆ. ಇದನ್ನು ಸ್ವತಃ ಯಲ್ಲಾಲಿಂಗ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಕುರಿಗಾಹಿ ಯಲ್ಲಾಲಿಂಗ ಅವರು, ‘ಬೆಳಗ್ಗೆ ಕುರಿಮೇಯಿಸಲು ಹೋದ ವೇಳೆ ಹಳ್ಳದ ಬಳಿ ಚಿರತೆ ಹೋಗಿದ್ದನ್ನು ಕಣ್ಣಾರೆ ಕಂಡಿದ್ದೇನೆ.ಈ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ.ಮಧ್ಯಮ ಗಾತ್ರದಲ್ಲಿ ಚಿರತೆ ಇದೆ’ ಎಂದು ತಿಳಿಸಿದರು.

ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ, ಗ್ರಾಮಸ್ಥರೊಬ್ಬರು ಚಿರತೆ ನೋಡಿದ್ದಾಗಿ ತಿಳಿಸಿದ್ದಾರೆ. ಅದರ ಸೆರೆಗೆ ಎರಡು ಬೋನುಗಳನ್ನು ಹಳ್ಳದ ದಡದಲ್ಲಿ ಇಡಲಾಗುತ್ತಿದೆ.ಚಿರತೆ ಓಡಾಡಿದ ಜಾಗೆ ಅತ್ಯಂತ ಇಕ್ಕಟ್ಟಾಗಿದ್ದು ಮುಳ್ಳುಕಂಟಿಗಳಿಂದ ಆವೃತವಾಗಿದೆ. ಕಾರ್ಯಾಚರಣೆ ಮುಂದುವರೆಸಿದ್ದೇವೆ ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು ಚಿರತೆ ಸೆರೆಗೆ ಕಾರ್ಯಚರಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಕಂದಗನೂರು ಗ್ರಾಮದ ಭಾಗದಲ್ಲಿ ಎರಡು ಜಾನುವಾರುಗಳನ್ನು ಕೊಂದಿದ್ದ ಚಿರತೆ ಇದೀಗ ಸ್ಥಳ ಬದಲಿಸಿ ಓಡಾಡುತ್ತಿರುವುದು ಗ್ರಾಮಸ್ಥರ ನಿದ್ದೆಗಡಿಸಿದೆ.ತಾಲ್ಲೂಕು ಆಡಳಿತ ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿವೆ.

ಕಂದಗನೂರು,ನಾಗರಾಳ, ಚಿರ್ಚನಕಲ್, ಹಂಡರಗಲ್ ಭಾಗದಲ್ಲಿ ರೈತರು ಚಿರತೆ ಭೀತಿಯಿಂದ ಹೊಲಗಳಿಗೆ ತಿರುಗಾಡುವುದನ್ನೇ ಬಿಟ್ಟು ಕೂತಿದ್ದಾರೆ. ಆದಷ್ಟು ಬೇಗ ಚಿರತೆಯನ್ನು ಪತ್ತೆ ಹಚ್ಚಬೇಕು ಎಂದು ಹಂಡರಗಲ್ ಗ್ರಾಮದ ಸಾಹೇಬಗೌಡ ಪಟೇಲ್, ಬಸವರಾಜ ನರಸಣಗಿ, ಮುತ್ತು ಕನ್ನೂರ ಆಗ್ರಹಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ