ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಮುದ್ದೇಬಿಹಾಳ : ಕಳೆದ ಒಂದು ವಾರದಿಂದ ತಾಲ್ಲೂಕಿನ ಯರಝರಿ ಗ್ರಾಪಂ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಸಂಚರಿಸುತ್ತಿರುವ ಕಾಡುಪ್ರಾಣಿಯ ಬಗ್ಗೆ ಖಚಿತ ಮಾಹಿತಿ ಹೊರಬಿದ್ದಿದ್ದು ಅದು ಚಿರತೆಯೇ ಎಂದು ದೃಢಪಟ್ಟಿದೆ.

ತಾಲ್ಲೂಕಿನ ಹಂಡರಗಲ್ ಗ್ರಾಮದ ಹಳ್ಳದಲ್ಲಿ ಶನಿವಾರ ಬೆಳಗ್ಗೆ ಕುರಿ ಮೇಯಿಸಲು ಹೋಗಿದ್ದ ಯರಝರಿ ಗ್ರಾಮದ ಕುರಿಗಾಹಿ ಯಲ್ಲಾಲಿಂಗ ವಾಲೀಕಾರ ಎಂಬುವರ ಕಣ್ಣಿಗೆ ಚಿರತೆ ಕಾಣಿಸಿಕೊಂಡಿದೆ. ಇದನ್ನು ಸ್ವತಃ ಯಲ್ಲಾಲಿಂಗ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಕುರಿಗಾಹಿ ಯಲ್ಲಾಲಿಂಗ ಅವರು, ‘ಬೆಳಗ್ಗೆ ಕುರಿಮೇಯಿಸಲು ಹೋದ ವೇಳೆ ಹಳ್ಳದ ಬಳಿ ಚಿರತೆ ಹೋಗಿದ್ದನ್ನು ಕಣ್ಣಾರೆ ಕಂಡಿದ್ದೇನೆ.ಈ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ.ಮಧ್ಯಮ ಗಾತ್ರದಲ್ಲಿ ಚಿರತೆ ಇದೆ’ ಎಂದು ತಿಳಿಸಿದರು.

ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ, ಗ್ರಾಮಸ್ಥರೊಬ್ಬರು ಚಿರತೆ ನೋಡಿದ್ದಾಗಿ ತಿಳಿಸಿದ್ದಾರೆ. ಅದರ ಸೆರೆಗೆ ಎರಡು ಬೋನುಗಳನ್ನು ಹಳ್ಳದ ದಡದಲ್ಲಿ ಇಡಲಾಗುತ್ತಿದೆ.ಚಿರತೆ ಓಡಾಡಿದ ಜಾಗೆ ಅತ್ಯಂತ ಇಕ್ಕಟ್ಟಾಗಿದ್ದು ಮುಳ್ಳುಕಂಟಿಗಳಿಂದ ಆವೃತವಾಗಿದೆ. ಕಾರ್ಯಾಚರಣೆ ಮುಂದುವರೆಸಿದ್ದೇವೆ ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು ಚಿರತೆ ಸೆರೆಗೆ ಕಾರ್ಯಚರಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಕಂದಗನೂರು ಗ್ರಾಮದ ಭಾಗದಲ್ಲಿ ಎರಡು ಜಾನುವಾರುಗಳನ್ನು ಕೊಂದಿದ್ದ ಚಿರತೆ ಇದೀಗ ಸ್ಥಳ ಬದಲಿಸಿ ಓಡಾಡುತ್ತಿರುವುದು ಗ್ರಾಮಸ್ಥರ ನಿದ್ದೆಗಡಿಸಿದೆ.ತಾಲ್ಲೂಕು ಆಡಳಿತ ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿವೆ.

ಕಂದಗನೂರು,ನಾಗರಾಳ, ಚಿರ್ಚನಕಲ್, ಹಂಡರಗಲ್ ಭಾಗದಲ್ಲಿ ರೈತರು ಚಿರತೆ ಭೀತಿಯಿಂದ ಹೊಲಗಳಿಗೆ ತಿರುಗಾಡುವುದನ್ನೇ ಬಿಟ್ಟು ಕೂತಿದ್ದಾರೆ. ಆದಷ್ಟು ಬೇಗ ಚಿರತೆಯನ್ನು ಪತ್ತೆ ಹಚ್ಚಬೇಕು ಎಂದು ಹಂಡರಗಲ್ ಗ್ರಾಮದ ಸಾಹೇಬಗೌಡ ಪಟೇಲ್, ಬಸವರಾಜ ನರಸಣಗಿ, ಮುತ್ತು ಕನ್ನೂರ ಆಗ್ರಹಿಸಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ