ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಸ್ಥಳ ಬದಲಿಸಿದ ಚಿರತೆ : ಹಂಡರಗಲ್ ಸೀಮೆಯಲ್ಲಿ ಪ್ರತ್ಯಕ್ಷ..!

ಮುದ್ದೇಬಿಹಾಳ : ಕಳೆದ ಒಂದು ವಾರದಿಂದ ತಾಲ್ಲೂಕಿನ ಯರಝರಿ ಗ್ರಾಪಂ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಸಂಚರಿಸುತ್ತಿರುವ ಕಾಡುಪ್ರಾಣಿಯ ಬಗ್ಗೆ ಖಚಿತ ಮಾಹಿತಿ ಹೊರಬಿದ್ದಿದ್ದು ಅದು ಚಿರತೆಯೇ ಎಂದು ದೃಢಪಟ್ಟಿದೆ.

ತಾಲ್ಲೂಕಿನ ಹಂಡರಗಲ್ ಗ್ರಾಮದ ಹಳ್ಳದಲ್ಲಿ ಶನಿವಾರ ಬೆಳಗ್ಗೆ ಕುರಿ ಮೇಯಿಸಲು ಹೋಗಿದ್ದ ಯರಝರಿ ಗ್ರಾಮದ ಕುರಿಗಾಹಿ ಯಲ್ಲಾಲಿಂಗ ವಾಲೀಕಾರ ಎಂಬುವರ ಕಣ್ಣಿಗೆ ಚಿರತೆ ಕಾಣಿಸಿಕೊಂಡಿದೆ. ಇದನ್ನು ಸ್ವತಃ ಯಲ್ಲಾಲಿಂಗ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಕುರಿಗಾಹಿ ಯಲ್ಲಾಲಿಂಗ ಅವರು, ‘ಬೆಳಗ್ಗೆ ಕುರಿಮೇಯಿಸಲು ಹೋದ ವೇಳೆ ಹಳ್ಳದ ಬಳಿ ಚಿರತೆ ಹೋಗಿದ್ದನ್ನು ಕಣ್ಣಾರೆ ಕಂಡಿದ್ದೇನೆ.ಈ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ.ಮಧ್ಯಮ ಗಾತ್ರದಲ್ಲಿ ಚಿರತೆ ಇದೆ’ ಎಂದು ತಿಳಿಸಿದರು.

ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ, ಗ್ರಾಮಸ್ಥರೊಬ್ಬರು ಚಿರತೆ ನೋಡಿದ್ದಾಗಿ ತಿಳಿಸಿದ್ದಾರೆ. ಅದರ ಸೆರೆಗೆ ಎರಡು ಬೋನುಗಳನ್ನು ಹಳ್ಳದ ದಡದಲ್ಲಿ ಇಡಲಾಗುತ್ತಿದೆ.ಚಿರತೆ ಓಡಾಡಿದ ಜಾಗೆ ಅತ್ಯಂತ ಇಕ್ಕಟ್ಟಾಗಿದ್ದು ಮುಳ್ಳುಕಂಟಿಗಳಿಂದ ಆವೃತವಾಗಿದೆ. ಕಾರ್ಯಾಚರಣೆ ಮುಂದುವರೆಸಿದ್ದೇವೆ ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು ಚಿರತೆ ಸೆರೆಗೆ ಕಾರ್ಯಚರಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಕಂದಗನೂರು ಗ್ರಾಮದ ಭಾಗದಲ್ಲಿ ಎರಡು ಜಾನುವಾರುಗಳನ್ನು ಕೊಂದಿದ್ದ ಚಿರತೆ ಇದೀಗ ಸ್ಥಳ ಬದಲಿಸಿ ಓಡಾಡುತ್ತಿರುವುದು ಗ್ರಾಮಸ್ಥರ ನಿದ್ದೆಗಡಿಸಿದೆ.ತಾಲ್ಲೂಕು ಆಡಳಿತ ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿವೆ.

ಕಂದಗನೂರು,ನಾಗರಾಳ, ಚಿರ್ಚನಕಲ್, ಹಂಡರಗಲ್ ಭಾಗದಲ್ಲಿ ರೈತರು ಚಿರತೆ ಭೀತಿಯಿಂದ ಹೊಲಗಳಿಗೆ ತಿರುಗಾಡುವುದನ್ನೇ ಬಿಟ್ಟು ಕೂತಿದ್ದಾರೆ. ಆದಷ್ಟು ಬೇಗ ಚಿರತೆಯನ್ನು ಪತ್ತೆ ಹಚ್ಚಬೇಕು ಎಂದು ಹಂಡರಗಲ್ ಗ್ರಾಮದ ಸಾಹೇಬಗೌಡ ಪಟೇಲ್, ಬಸವರಾಜ ನರಸಣಗಿ, ಮುತ್ತು ಕನ್ನೂರ ಆಗ್ರಹಿಸಿದ್ದಾರೆ.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್