ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮುದ್ದೇಬಿಹಾಳ : ಅನುಮತಿ ಪಡೆದುಕೊಂಡು ಕಳೆದ ನಲವತ್ತು ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದರೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ತಮಗೆ ತೊಂದರೆ ಕೊಡುತ್ತಿದ್ದು ಅವರ ವಿರುದ್ದ ಮೇಲಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಬಲದಿನ್ನಿ ಮೀನುಗಾರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಈಚೇಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಮೀನುಗಾರರು, ಮೀನುಗಾರಿಕೆ ಇಲಾಖೆ ಅಧಿಕಾರಿ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಬಲದಿನ್ನಿ ಗ್ರಾಮಕ್ಕೆ ಬಂದು ಕಳೆದ 40 ವರ್ಷಗಳಿಂದ ಇಲ್ಲಿಯೇ ನೆಲೆಸಿದ್ದು ಇರುತ್ತದೆ.ಅದಕ್ಕೆ ಸಂಬAಧಿಸಿದ 50 ಮನೆಗಳು ಮೀನುಗಾರಿಕೆ ಇಲಾಖೆಯಿಂದ ಆಶ್ರಯ ಮನೆಗಳನ್ನು ಪಡೆದಿದ್ದು ಹಕ್ಕುಪತ್ರ ಸಹಿತ ಇರುತ್ತವೆ.100 ಜನ ಮೀನು ಹಿಡಿಯುವವರು ಆಧಾರ್ ಕಾರ್ಡ ಅಧಿಕೃತವಾಗಿ ಪಡೆದುಕೊಂಡಿದ್ದು ಇರುತ್ತದೆ.150 ಜನರು ಭಾರತದ ಚುನಾವಣಾ ಗುರುತಿನ ಚೀಟಿ ಹೊಂದಿದ್ದೇವೆ.ಸರ್ಕಾರದಿAದ 60 ಜನರು ಮೀನು ಹಿಡಿಯುವ ಲೈಸೆನ್ಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಅಧಿಕಾರಿ ಶರಣಗೌಡ ಬಿರಾದಾರ ಎಲ್ಲ ಮೀನುಗಾರರಿಗೆ ತೊಂದರೆ ಕೊಡುತ್ತಿದ್ದು ಬಡ ಮೀನುಗಾರರ ಸಂಘದ ಅಧ್ಯಕ್ಷರ ಮೇಲೆ ಖೊಟ್ಟಿ ಕೇಸು ದಾಖಲಿಸಿ ಪೊಲೀಸರಿಂದ ಹೊಡೆಸಿ ಜೈಲಿಗೆ ಕಳುಹಿಸಿದ್ದು ಇರುತ್ತದೆ.ಮೀನು ಹಿಡಿಯಲು ಸರ್ಕಾರದಿಂದ ಅನುಮತಿ ಪತ್ರ ಇದ್ದರೂ ಒಂದು ಪುಟ್ಟಿ ಇಂಜನ್‌ಗೆ 5000 ರೂ.ಲಂಚ ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.

ಲಂಚ ಕೊಡದೇ ಹೋದರೆ ನಿಮ್ಮ ಅನುಮತಿ ಪತ್ರ ರದ್ದು ಮಾಡುತ್ತೇನೆ ಮತ್ತು ನೀವು ನಮ್ಮ ರಾಜ್ಯ ಬಿಟ್ಟು ಹೋಗಬೇಕು ಎಂದು ರಾಜಕೀಯ ವ್ಯಕ್ತಿಗಳ ಸಹಾಯದಿಂದ ಒತ್ತಡ ಹೇರುತ್ತಿದ್ದಾರೆ. ಸರ್ಕಾರದಿಂದ ಮೀನುಗಾರರಿಗೆ ಬರುತ್ತಿರುವ ಸೌಲಭ್ಯಗಳನ್ನು ಬೇರೊಬ್ಬರಿಗೆ ಹಣ ಪಡೆದುಕೊಂಡು ಮಾರಾಟ ಮಾಡಿದ್ದು ಸಾಕಷ್ಟು ಉದಾಹರಣೆಗಳು ಇದ್ದು ಈ ಅಧಿಕಾರಿ ವಿರುದ್ದ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿಗೆ ಬಲದಿನ್ನಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ರಾಹಮು, ಗ್ರಾಪಂ ಸದಸ್ಯ ಅಕ್ಷಯ ನಾಡಗೌಡ,ಮಂಜುನಾಥ ಮುಂದಿನಮನಿ, ರಾಹುಲ ಜಾಗಿರದಾರ,ಗಂಗಾಧರ ಮುಂದಿನಮನಿ, ಯಲ್ಲಪ್ಪ ಮಾದರ, ರಾಜು, ಕೆ.ಎಂ.ಮಾಸೆನು, ಸಿ.ಎಚ್.ಬಂಗಾರಿ, ರಾಜಣ್ಣ ಮೊದಲಾದವರು ಸಹಿ ಮಾಡಿದ್ದಾರೆ.

Latest News

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ

ಬಿ.ಎಸ್.ಎಫ್‌ಗೆ ಆಯ್ಕೆ :                                                                  ಫೆ.5 ರಂದು ಅಭಿನಂದನಾ ಸಮಾರಂಭ

ಬಿ.ಎಸ್.ಎಫ್‌ಗೆ ಆಯ್ಕೆ : ಫೆ.5 ರಂದು ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಬಿ.ಎಸ್.ಎಫ್‌ಗೆ ಆಯ್ಕೆಯಗೊಂಡ ತಾಲೂಕಿನ ಪ್ರಥಮ ಯುವತಿ ಸಿದ್ದಾಪೂರ ಪಿ.ಟಿ ಗ್ರಾಮದ ಕುಮಾರಿ

ಮುಸ್ಲಿಂ ಸಮಾಜದವರಿಂದ ಮನವಿ:                                               ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುಸ್ಲಿಂ ಸಮಾಜದವರಿಂದ ಮನವಿ: ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪೂರ್ವದ ಕಾಲದಿಂದಲೂ ಹಿರಿಯರು ನಮ್ಮ ಸಮಾಜದವರು ಯಾರೇ ನಿಧನ ಹೊಂದಿದರೂ ಅವರ

ನವಜೀವನೋತ್ಸವ ಕಾರ್ಯಕ್ರಮ:                                    ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ಮುದ್ದೇಬಿಹಾಳ : ಯಾವುದೋ ಕಾರಣದಿಂದಾಗ ಕುಡಿತದ ದಾಸರಾಗಿದ್ದುಕೊಂಡು ಮನ,ಮನೆಯ ಸ್ಥಿತಿಯನ್ನು ಹಾಳುಮಾಡಿಕೊಂಡಿದ್ದವರು ಮದ್ಯವರ್ಜನ ಶಿಬಿರದ

ಸಮುದಾಯದ ಏಳ್ಗೆಗೆ ಬದ್ಧ-ಮಲೀಕಸಾಬ ನದಾಫ

ಸಮುದಾಯದ ಏಳ್ಗೆಗೆ ಬದ್ಧ-ಮಲೀಕಸಾಬ ನದಾಫ

ಮುದ್ದೇಬಿಹಾಳ : ಸಮಾಜದಲ್ಲಿ ನದಾಫ/ಪಿಂಜಾರ್ ಸಮುದಾಯವನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನದಾಫ್ / ಪಿಂಜಾರ ಸಂಘದ ತಾಲ್ಲೂಕು ಘಟಕ ಶ್ರಮಿಸುತ್ತಿದೆ ಎಂದು ಮುದ್ದೇಬಿಹಾಳ ತಾಲೂಕಾ ಘಟಕದ ಅಧ್ಯಕ್ಷ ಮಲೀಕಸಾಬ ನದಾಫ ಹೇಳಿದರು. ಪಟ್ಟಣದಲ್ಲಿ ಶನಿವಾರ ನದಾಫ / ಪಿಂಜಾರ್ ಸಂಘದಿAದ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಂಘವು ಸಮಾಜದ ಶೈಕ್ಷಣಿಕ,ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ದಿಗೆ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ.ನೂತನ ಕ್ಯಾಲೆಂಡರ್ ಮೂಲಕ

ದಶಮಾನೋತ್ಸವ ಆಚರಣೆ:                               ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ಮುದ್ದೇಬಿಹಾಳ : ತಾಲ್ಲೂಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಣೆ ಆರಂಭಿಸಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಚೇಗೆ ಸಂಸ್ಥೆಯ ಕಚೇರಿಯಲ್ಲಿ ಚೈತನ್ಯ ಸ್ವಸಹಾಯ ಗುಂಪಿನ 10ನೇ ವರ್ಷದ ದಶಮಾನೋತ್ಸವದ ಅಂಗವಾಗಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ ಮಾತನಾಡಿ, ಮುದ್ದೇಬಿಹಾಳ ತಾಲೂಕಿಗೆ ಧರ್ಮಸ್ಥಳ ಯೋಜನೆ ಬಂದು 10 ವರ್ಷ ಪೂರ್ಣಗೊಂಡಿದ್ದು ಸ್ವ ಸಹಾಯ ಸಂಘದ ಸದಸ್ಯರು ಸಂಘಗಳನ್ನು ರಚನೆ ಮಾಡಿಕೊಂಡು ಸಾಲ ಪಡೆದು ಅನೇಕ ಅಭಿವೃದ್ಧಿ