ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮುದ್ದೇಬಿಹಾಳ : ಅನುಮತಿ ಪಡೆದುಕೊಂಡು ಕಳೆದ ನಲವತ್ತು ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದರೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ತಮಗೆ ತೊಂದರೆ ಕೊಡುತ್ತಿದ್ದು ಅವರ ವಿರುದ್ದ ಮೇಲಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಬಲದಿನ್ನಿ ಮೀನುಗಾರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಈಚೇಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಮೀನುಗಾರರು, ಮೀನುಗಾರಿಕೆ ಇಲಾಖೆ ಅಧಿಕಾರಿ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಬಲದಿನ್ನಿ ಗ್ರಾಮಕ್ಕೆ ಬಂದು ಕಳೆದ 40 ವರ್ಷಗಳಿಂದ ಇಲ್ಲಿಯೇ ನೆಲೆಸಿದ್ದು ಇರುತ್ತದೆ.ಅದಕ್ಕೆ ಸಂಬAಧಿಸಿದ 50 ಮನೆಗಳು ಮೀನುಗಾರಿಕೆ ಇಲಾಖೆಯಿಂದ ಆಶ್ರಯ ಮನೆಗಳನ್ನು ಪಡೆದಿದ್ದು ಹಕ್ಕುಪತ್ರ ಸಹಿತ ಇರುತ್ತವೆ.100 ಜನ ಮೀನು ಹಿಡಿಯುವವರು ಆಧಾರ್ ಕಾರ್ಡ ಅಧಿಕೃತವಾಗಿ ಪಡೆದುಕೊಂಡಿದ್ದು ಇರುತ್ತದೆ.150 ಜನರು ಭಾರತದ ಚುನಾವಣಾ ಗುರುತಿನ ಚೀಟಿ ಹೊಂದಿದ್ದೇವೆ.ಸರ್ಕಾರದಿAದ 60 ಜನರು ಮೀನು ಹಿಡಿಯುವ ಲೈಸೆನ್ಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಅಧಿಕಾರಿ ಶರಣಗೌಡ ಬಿರಾದಾರ ಎಲ್ಲ ಮೀನುಗಾರರಿಗೆ ತೊಂದರೆ ಕೊಡುತ್ತಿದ್ದು ಬಡ ಮೀನುಗಾರರ ಸಂಘದ ಅಧ್ಯಕ್ಷರ ಮೇಲೆ ಖೊಟ್ಟಿ ಕೇಸು ದಾಖಲಿಸಿ ಪೊಲೀಸರಿಂದ ಹೊಡೆಸಿ ಜೈಲಿಗೆ ಕಳುಹಿಸಿದ್ದು ಇರುತ್ತದೆ.ಮೀನು ಹಿಡಿಯಲು ಸರ್ಕಾರದಿಂದ ಅನುಮತಿ ಪತ್ರ ಇದ್ದರೂ ಒಂದು ಪುಟ್ಟಿ ಇಂಜನ್‌ಗೆ 5000 ರೂ.ಲಂಚ ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.

ಲಂಚ ಕೊಡದೇ ಹೋದರೆ ನಿಮ್ಮ ಅನುಮತಿ ಪತ್ರ ರದ್ದು ಮಾಡುತ್ತೇನೆ ಮತ್ತು ನೀವು ನಮ್ಮ ರಾಜ್ಯ ಬಿಟ್ಟು ಹೋಗಬೇಕು ಎಂದು ರಾಜಕೀಯ ವ್ಯಕ್ತಿಗಳ ಸಹಾಯದಿಂದ ಒತ್ತಡ ಹೇರುತ್ತಿದ್ದಾರೆ. ಸರ್ಕಾರದಿಂದ ಮೀನುಗಾರರಿಗೆ ಬರುತ್ತಿರುವ ಸೌಲಭ್ಯಗಳನ್ನು ಬೇರೊಬ್ಬರಿಗೆ ಹಣ ಪಡೆದುಕೊಂಡು ಮಾರಾಟ ಮಾಡಿದ್ದು ಸಾಕಷ್ಟು ಉದಾಹರಣೆಗಳು ಇದ್ದು ಈ ಅಧಿಕಾರಿ ವಿರುದ್ದ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿಗೆ ಬಲದಿನ್ನಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ರಾಹಮು, ಗ್ರಾಪಂ ಸದಸ್ಯ ಅಕ್ಷಯ ನಾಡಗೌಡ,ಮಂಜುನಾಥ ಮುಂದಿನಮನಿ, ರಾಹುಲ ಜಾಗಿರದಾರ,ಗಂಗಾಧರ ಮುಂದಿನಮನಿ, ಯಲ್ಲಪ್ಪ ಮಾದರ, ರಾಜು, ಕೆ.ಎಂ.ಮಾಸೆನು, ಸಿ.ಎಚ್.ಬಂಗಾರಿ, ರಾಜಣ್ಣ ಮೊದಲಾದವರು ಸಹಿ ಮಾಡಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ