ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮೀನುಗಾರರ ಮೇಲೆ ದೌರ್ಜನ್ಯ ಆರೋಪ: ಮೀನುಗಾರಿಕೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಮುದ್ದೇಬಿಹಾಳ : ಅನುಮತಿ ಪಡೆದುಕೊಂಡು ಕಳೆದ ನಲವತ್ತು ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದರೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ತಮಗೆ ತೊಂದರೆ ಕೊಡುತ್ತಿದ್ದು ಅವರ ವಿರುದ್ದ ಮೇಲಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಬಲದಿನ್ನಿ ಮೀನುಗಾರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಈಚೇಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಮೀನುಗಾರರು, ಮೀನುಗಾರಿಕೆ ಇಲಾಖೆ ಅಧಿಕಾರಿ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಬಲದಿನ್ನಿ ಗ್ರಾಮಕ್ಕೆ ಬಂದು ಕಳೆದ 40 ವರ್ಷಗಳಿಂದ ಇಲ್ಲಿಯೇ ನೆಲೆಸಿದ್ದು ಇರುತ್ತದೆ.ಅದಕ್ಕೆ ಸಂಬAಧಿಸಿದ 50 ಮನೆಗಳು ಮೀನುಗಾರಿಕೆ ಇಲಾಖೆಯಿಂದ ಆಶ್ರಯ ಮನೆಗಳನ್ನು ಪಡೆದಿದ್ದು ಹಕ್ಕುಪತ್ರ ಸಹಿತ ಇರುತ್ತವೆ.100 ಜನ ಮೀನು ಹಿಡಿಯುವವರು ಆಧಾರ್ ಕಾರ್ಡ ಅಧಿಕೃತವಾಗಿ ಪಡೆದುಕೊಂಡಿದ್ದು ಇರುತ್ತದೆ.150 ಜನರು ಭಾರತದ ಚುನಾವಣಾ ಗುರುತಿನ ಚೀಟಿ ಹೊಂದಿದ್ದೇವೆ.ಸರ್ಕಾರದಿAದ 60 ಜನರು ಮೀನು ಹಿಡಿಯುವ ಲೈಸೆನ್ಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಅಧಿಕಾರಿ ಶರಣಗೌಡ ಬಿರಾದಾರ ಎಲ್ಲ ಮೀನುಗಾರರಿಗೆ ತೊಂದರೆ ಕೊಡುತ್ತಿದ್ದು ಬಡ ಮೀನುಗಾರರ ಸಂಘದ ಅಧ್ಯಕ್ಷರ ಮೇಲೆ ಖೊಟ್ಟಿ ಕೇಸು ದಾಖಲಿಸಿ ಪೊಲೀಸರಿಂದ ಹೊಡೆಸಿ ಜೈಲಿಗೆ ಕಳುಹಿಸಿದ್ದು ಇರುತ್ತದೆ.ಮೀನು ಹಿಡಿಯಲು ಸರ್ಕಾರದಿಂದ ಅನುಮತಿ ಪತ್ರ ಇದ್ದರೂ ಒಂದು ಪುಟ್ಟಿ ಇಂಜನ್‌ಗೆ 5000 ರೂ.ಲಂಚ ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.

ಲಂಚ ಕೊಡದೇ ಹೋದರೆ ನಿಮ್ಮ ಅನುಮತಿ ಪತ್ರ ರದ್ದು ಮಾಡುತ್ತೇನೆ ಮತ್ತು ನೀವು ನಮ್ಮ ರಾಜ್ಯ ಬಿಟ್ಟು ಹೋಗಬೇಕು ಎಂದು ರಾಜಕೀಯ ವ್ಯಕ್ತಿಗಳ ಸಹಾಯದಿಂದ ಒತ್ತಡ ಹೇರುತ್ತಿದ್ದಾರೆ. ಸರ್ಕಾರದಿಂದ ಮೀನುಗಾರರಿಗೆ ಬರುತ್ತಿರುವ ಸೌಲಭ್ಯಗಳನ್ನು ಬೇರೊಬ್ಬರಿಗೆ ಹಣ ಪಡೆದುಕೊಂಡು ಮಾರಾಟ ಮಾಡಿದ್ದು ಸಾಕಷ್ಟು ಉದಾಹರಣೆಗಳು ಇದ್ದು ಈ ಅಧಿಕಾರಿ ವಿರುದ್ದ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿಗೆ ಬಲದಿನ್ನಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ರಾಹಮು, ಗ್ರಾಪಂ ಸದಸ್ಯ ಅಕ್ಷಯ ನಾಡಗೌಡ,ಮಂಜುನಾಥ ಮುಂದಿನಮನಿ, ರಾಹುಲ ಜಾಗಿರದಾರ,ಗಂಗಾಧರ ಮುಂದಿನಮನಿ, ಯಲ್ಲಪ್ಪ ಮಾದರ, ರಾಜು, ಕೆ.ಎಂ.ಮಾಸೆನು, ಸಿ.ಎಚ್.ಬಂಗಾರಿ, ರಾಜಣ್ಣ ಮೊದಲಾದವರು ಸಹಿ ಮಾಡಿದ್ದಾರೆ.

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ