ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ನಿಂತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ, ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಇಲ್ಲಿನ ಮುಖ್ಯಶಿಕ್ಷಕರು,ಸಹ ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ.ನಾಡ ಹಬ್ಬ ಇದ್ದರೂ ನಾಡಧ್ವಜವನ್ನು ಆರೋಹಣ ಮಾಡದೇ ಮುಖ್ಯಶಿಕ್ಷಕರು ನಿರ್ಲಕ್ಷ್ಯ ಹಿಸಿದ್ದಾರೆ.ಕೇಳಿದರೆ ನಮ್ಮಲ್ಲಿ ಧ್ವಜಸ್ತಂಭ ಪ್ರತ್ಯೇಕವಾದದ್ದು ಇರಲಿಲ್ಲ ಅದಕ್ಕೆ ಆರೋಹಣ ಮಾಡಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ.ನಮಗೆ ಹೇಳಿದ್ದರೆ ಪಂಚಾಯಿತಿಯಿಂದ ಧ್ವಜಸ್ತಂಭ ಕೂಡಿಸುತ್ತಿದ್ದೇವು ಎಂದು ಆರೋಪಿಸಿದರು.

ಗ್ರಾಮದ ಮುಖಂಡರಾದ ನಿಂಗನಗೌಡ ಬಿರಾದಾರ, ಜುಮ್ಮಣ್ಣ ಚಲವಾದಿ, ಮಂಜು ನಾವದಗಿ,ದ್ಯಾಮಣ್ಣ ಗುಡದಿನ್ನಿ, ಬಸ್ಸು ಹುಲಗಬಾಳ, ಮಲ್ಲು ಹೆಬ್ಬಾಳ, ಅಲ್ಲಾಸಾ ಮುದ್ನಾಳ,ಅಡಿಯಪ್ಪ ಮದರಿ, ಸಿದ್ದು ಹೆಬ್ಬಾಳ, ಶಿವು ಶಿರೋಳಕರ , ಹಣಮಂತ ಮಾದರ, ಜಟ್ಟೆಪ್ಪ ನೇಬಗೇರಿ, ಶೇಖಪ್ಪ ಹುಲಗಬಾಳ, ಶಾಂತು ಬಿರಾದಾರ ಮೊದಲಾದವರು ಇದ್ದರು.

ಐಟಿಬಿಟಿ ಶಿಕ್ಷಕರಾಗಿದ್ದಾರೆ-ಬೆಲವಂತ್ರಕAಠಿ
ಶಿರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲ ಐಟಿಬಿಟಿ ಶಿಕ್ಷಕರಂತೆ ಇದ್ದಾರೆ. ಗ್ರಾಮಸ್ಥರೊಡನೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿದ್ದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ.ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಬರುವುದಿಲ್ಲ.ತಮಗೆ ತಿಳಿದಾಗ ಶಾಲೆಗೆ ಬಂದು ಬೇಗನೆ ಹೋಗುತ್ತಾರೆ.ಇದರಿಂದ ಶಿರೋಳ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಗ್ರಾಮದ ಯುವ ಮುಖಂಡ ರಮೇಶ ಬೆಲವಂತ್ರಕಂಠಿ ದೂರಿದರು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ