ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ನಿಂತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ, ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಇಲ್ಲಿನ ಮುಖ್ಯಶಿಕ್ಷಕರು,ಸಹ ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ.ನಾಡ ಹಬ್ಬ ಇದ್ದರೂ ನಾಡಧ್ವಜವನ್ನು ಆರೋಹಣ ಮಾಡದೇ ಮುಖ್ಯಶಿಕ್ಷಕರು ನಿರ್ಲಕ್ಷ್ಯ ಹಿಸಿದ್ದಾರೆ.ಕೇಳಿದರೆ ನಮ್ಮಲ್ಲಿ ಧ್ವಜಸ್ತಂಭ ಪ್ರತ್ಯೇಕವಾದದ್ದು ಇರಲಿಲ್ಲ ಅದಕ್ಕೆ ಆರೋಹಣ ಮಾಡಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ.ನಮಗೆ ಹೇಳಿದ್ದರೆ ಪಂಚಾಯಿತಿಯಿಂದ ಧ್ವಜಸ್ತಂಭ ಕೂಡಿಸುತ್ತಿದ್ದೇವು ಎಂದು ಆರೋಪಿಸಿದರು.

ಗ್ರಾಮದ ಮುಖಂಡರಾದ ನಿಂಗನಗೌಡ ಬಿರಾದಾರ, ಜುಮ್ಮಣ್ಣ ಚಲವಾದಿ, ಮಂಜು ನಾವದಗಿ,ದ್ಯಾಮಣ್ಣ ಗುಡದಿನ್ನಿ, ಬಸ್ಸು ಹುಲಗಬಾಳ, ಮಲ್ಲು ಹೆಬ್ಬಾಳ, ಅಲ್ಲಾಸಾ ಮುದ್ನಾಳ,ಅಡಿಯಪ್ಪ ಮದರಿ, ಸಿದ್ದು ಹೆಬ್ಬಾಳ, ಶಿವು ಶಿರೋಳಕರ , ಹಣಮಂತ ಮಾದರ, ಜಟ್ಟೆಪ್ಪ ನೇಬಗೇರಿ, ಶೇಖಪ್ಪ ಹುಲಗಬಾಳ, ಶಾಂತು ಬಿರಾದಾರ ಮೊದಲಾದವರು ಇದ್ದರು.

ಐಟಿಬಿಟಿ ಶಿಕ್ಷಕರಾಗಿದ್ದಾರೆ-ಬೆಲವಂತ್ರಕAಠಿ
ಶಿರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲ ಐಟಿಬಿಟಿ ಶಿಕ್ಷಕರಂತೆ ಇದ್ದಾರೆ. ಗ್ರಾಮಸ್ಥರೊಡನೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿದ್ದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ.ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಬರುವುದಿಲ್ಲ.ತಮಗೆ ತಿಳಿದಾಗ ಶಾಲೆಗೆ ಬಂದು ಬೇಗನೆ ಹೋಗುತ್ತಾರೆ.ಇದರಿಂದ ಶಿರೋಳ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಗ್ರಾಮದ ಯುವ ಮುಖಂಡ ರಮೇಶ ಬೆಲವಂತ್ರಕಂಠಿ ದೂರಿದರು.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್