ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ನಿಂತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ, ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಇಲ್ಲಿನ ಮುಖ್ಯಶಿಕ್ಷಕರು,ಸಹ ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ.ನಾಡ ಹಬ್ಬ ಇದ್ದರೂ ನಾಡಧ್ವಜವನ್ನು ಆರೋಹಣ ಮಾಡದೇ ಮುಖ್ಯಶಿಕ್ಷಕರು ನಿರ್ಲಕ್ಷ್ಯ ಹಿಸಿದ್ದಾರೆ.ಕೇಳಿದರೆ ನಮ್ಮಲ್ಲಿ ಧ್ವಜಸ್ತಂಭ ಪ್ರತ್ಯೇಕವಾದದ್ದು ಇರಲಿಲ್ಲ ಅದಕ್ಕೆ ಆರೋಹಣ ಮಾಡಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ.ನಮಗೆ ಹೇಳಿದ್ದರೆ ಪಂಚಾಯಿತಿಯಿಂದ ಧ್ವಜಸ್ತಂಭ ಕೂಡಿಸುತ್ತಿದ್ದೇವು ಎಂದು ಆರೋಪಿಸಿದರು.

ಗ್ರಾಮದ ಮುಖಂಡರಾದ ನಿಂಗನಗೌಡ ಬಿರಾದಾರ, ಜುಮ್ಮಣ್ಣ ಚಲವಾದಿ, ಮಂಜು ನಾವದಗಿ,ದ್ಯಾಮಣ್ಣ ಗುಡದಿನ್ನಿ, ಬಸ್ಸು ಹುಲಗಬಾಳ, ಮಲ್ಲು ಹೆಬ್ಬಾಳ, ಅಲ್ಲಾಸಾ ಮುದ್ನಾಳ,ಅಡಿಯಪ್ಪ ಮದರಿ, ಸಿದ್ದು ಹೆಬ್ಬಾಳ, ಶಿವು ಶಿರೋಳಕರ , ಹಣಮಂತ ಮಾದರ, ಜಟ್ಟೆಪ್ಪ ನೇಬಗೇರಿ, ಶೇಖಪ್ಪ ಹುಲಗಬಾಳ, ಶಾಂತು ಬಿರಾದಾರ ಮೊದಲಾದವರು ಇದ್ದರು.

ಐಟಿಬಿಟಿ ಶಿಕ್ಷಕರಾಗಿದ್ದಾರೆ-ಬೆಲವಂತ್ರಕAಠಿ
ಶಿರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲ ಐಟಿಬಿಟಿ ಶಿಕ್ಷಕರಂತೆ ಇದ್ದಾರೆ. ಗ್ರಾಮಸ್ಥರೊಡನೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿದ್ದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ.ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಬರುವುದಿಲ್ಲ.ತಮಗೆ ತಿಳಿದಾಗ ಶಾಲೆಗೆ ಬಂದು ಬೇಗನೆ ಹೋಗುತ್ತಾರೆ.ಇದರಿಂದ ಶಿರೋಳ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಗ್ರಾಮದ ಯುವ ಮುಖಂಡ ರಮೇಶ ಬೆಲವಂತ್ರಕಂಠಿ ದೂರಿದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ