ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ನಿಂತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ, ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಇಲ್ಲಿನ ಮುಖ್ಯಶಿಕ್ಷಕರು,ಸಹ ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ.ನಾಡ ಹಬ್ಬ ಇದ್ದರೂ ನಾಡಧ್ವಜವನ್ನು ಆರೋಹಣ ಮಾಡದೇ ಮುಖ್ಯಶಿಕ್ಷಕರು ನಿರ್ಲಕ್ಷ್ಯ ಹಿಸಿದ್ದಾರೆ.ಕೇಳಿದರೆ ನಮ್ಮಲ್ಲಿ ಧ್ವಜಸ್ತಂಭ ಪ್ರತ್ಯೇಕವಾದದ್ದು ಇರಲಿಲ್ಲ ಅದಕ್ಕೆ ಆರೋಹಣ ಮಾಡಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ.ನಮಗೆ ಹೇಳಿದ್ದರೆ ಪಂಚಾಯಿತಿಯಿಂದ ಧ್ವಜಸ್ತಂಭ ಕೂಡಿಸುತ್ತಿದ್ದೇವು ಎಂದು ಆರೋಪಿಸಿದರು.

ಗ್ರಾಮದ ಮುಖಂಡರಾದ ನಿಂಗನಗೌಡ ಬಿರಾದಾರ, ಜುಮ್ಮಣ್ಣ ಚಲವಾದಿ, ಮಂಜು ನಾವದಗಿ,ದ್ಯಾಮಣ್ಣ ಗುಡದಿನ್ನಿ, ಬಸ್ಸು ಹುಲಗಬಾಳ, ಮಲ್ಲು ಹೆಬ್ಬಾಳ, ಅಲ್ಲಾಸಾ ಮುದ್ನಾಳ,ಅಡಿಯಪ್ಪ ಮದರಿ, ಸಿದ್ದು ಹೆಬ್ಬಾಳ, ಶಿವು ಶಿರೋಳಕರ , ಹಣಮಂತ ಮಾದರ, ಜಟ್ಟೆಪ್ಪ ನೇಬಗೇರಿ, ಶೇಖಪ್ಪ ಹುಲಗಬಾಳ, ಶಾಂತು ಬಿರಾದಾರ ಮೊದಲಾದವರು ಇದ್ದರು.

ಐಟಿಬಿಟಿ ಶಿಕ್ಷಕರಾಗಿದ್ದಾರೆ-ಬೆಲವಂತ್ರಕAಠಿ
ಶಿರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲ ಐಟಿಬಿಟಿ ಶಿಕ್ಷಕರಂತೆ ಇದ್ದಾರೆ. ಗ್ರಾಮಸ್ಥರೊಡನೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿದ್ದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ.ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಬರುವುದಿಲ್ಲ.ತಮಗೆ ತಿಳಿದಾಗ ಶಾಲೆಗೆ ಬಂದು ಬೇಗನೆ ಹೋಗುತ್ತಾರೆ.ಇದರಿಂದ ಶಿರೋಳ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಗ್ರಾಮದ ಯುವ ಮುಖಂಡ ರಮೇಶ ಬೆಲವಂತ್ರಕಂಠಿ ದೂರಿದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ