ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ನಿಂತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ, ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಇಲ್ಲಿನ ಮುಖ್ಯಶಿಕ್ಷಕರು,ಸಹ ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ.ನಾಡ ಹಬ್ಬ ಇದ್ದರೂ ನಾಡಧ್ವಜವನ್ನು ಆರೋಹಣ ಮಾಡದೇ ಮುಖ್ಯಶಿಕ್ಷಕರು ನಿರ್ಲಕ್ಷ್ಯ ಹಿಸಿದ್ದಾರೆ.ಕೇಳಿದರೆ ನಮ್ಮಲ್ಲಿ ಧ್ವಜಸ್ತಂಭ ಪ್ರತ್ಯೇಕವಾದದ್ದು ಇರಲಿಲ್ಲ ಅದಕ್ಕೆ ಆರೋಹಣ ಮಾಡಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ.ನಮಗೆ ಹೇಳಿದ್ದರೆ ಪಂಚಾಯಿತಿಯಿಂದ ಧ್ವಜಸ್ತಂಭ ಕೂಡಿಸುತ್ತಿದ್ದೇವು ಎಂದು ಆರೋಪಿಸಿದರು.

ಗ್ರಾಮದ ಮುಖಂಡರಾದ ನಿಂಗನಗೌಡ ಬಿರಾದಾರ, ಜುಮ್ಮಣ್ಣ ಚಲವಾದಿ, ಮಂಜು ನಾವದಗಿ,ದ್ಯಾಮಣ್ಣ ಗುಡದಿನ್ನಿ, ಬಸ್ಸು ಹುಲಗಬಾಳ, ಮಲ್ಲು ಹೆಬ್ಬಾಳ, ಅಲ್ಲಾಸಾ ಮುದ್ನಾಳ,ಅಡಿಯಪ್ಪ ಮದರಿ, ಸಿದ್ದು ಹೆಬ್ಬಾಳ, ಶಿವು ಶಿರೋಳಕರ , ಹಣಮಂತ ಮಾದರ, ಜಟ್ಟೆಪ್ಪ ನೇಬಗೇರಿ, ಶೇಖಪ್ಪ ಹುಲಗಬಾಳ, ಶಾಂತು ಬಿರಾದಾರ ಮೊದಲಾದವರು ಇದ್ದರು.

ಐಟಿಬಿಟಿ ಶಿಕ್ಷಕರಾಗಿದ್ದಾರೆ-ಬೆಲವಂತ್ರಕAಠಿ
ಶಿರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲ ಐಟಿಬಿಟಿ ಶಿಕ್ಷಕರಂತೆ ಇದ್ದಾರೆ. ಗ್ರಾಮಸ್ಥರೊಡನೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿದ್ದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ.ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಬರುವುದಿಲ್ಲ.ತಮಗೆ ತಿಳಿದಾಗ ಶಾಲೆಗೆ ಬಂದು ಬೇಗನೆ ಹೋಗುತ್ತಾರೆ.ಇದರಿಂದ ಶಿರೋಳ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಗ್ರಾಮದ ಯುವ ಮುಖಂಡ ರಮೇಶ ಬೆಲವಂತ್ರಕಂಠಿ ದೂರಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು