ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ಮುದ್ದೇಬಿಹಾಳ : ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಬೇಕಾದ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯಲ್ಲಿ ಸಲ್ಲಿಸದೇ ಅವಧಿ ಮುಗಿದ ಬಳಿಕ ಸಲ್ಲಿಸಲು ಮುಂದಾದ ಅಭ್ಯರ್ಥಿಯ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾದ ಚುನಾವಣಾಧಿಕಾರಿಯೊಂದಿಗೆ ಇನ್ನೋರ್ವ ಅಭ್ಯರ್ಥಿಯ ಬೆಂಬಲಿಗರು ವಾಗ್ವಾದ ನಡೆಸಿದ ಘಟನೆ ತಾಲ್ಲೂಕಿನ ಕುಂಟೋಜಿಯಲ್ಲಿ ಮಂಗಳವಾರ ನಡೆದಿದೆ.

ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯ ಮೂರನೇ ವಾರ್ಡ್’ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. 3ಬಿ ವರ್ಗ ಮಹಿಳಾ ಮೀಸಲಾತಿಗೆ ಸಿಮೀತವಾಗಿದ್ದ ಸ್ಥಾನಕ್ಕೆ ಕುಂಟೋಜಿಯ ಶಾಂತಾ ವೀರೇಶ ಮದರಿ ಹಾಗೂ ಕವಿತಾ ಹಣಮಂತ್ರಾಯ ಶಿರಗುಪ್ಪಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕವಿತಾ ಶಿರಗುಪ್ಪಿ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸದೇ ಇರುವುದು ಕಂಡು ಬಂದಿದೆ. ನಾಮಪತ್ರ ಸ್ವೀಕಾರದ ಅವಧಿ ಮುಗಿದ ನಂತರ ಜಾತಿ ಪ್ರಮಾಣ ಪತ್ರವನ್ನು ಅಭ್ಯರ್ಥಿ ಕವಿತಾ ಅವರು ತಮ್ಮ ಬೆಂಬಲಿಗರಿಂದ ಪಡೆದು ಚುನಾವಣಾಧಿಕಾರಿಗೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಂತಾ ಮದರಿ ಹಾಗೂ ಬೆಂಬಲಿಗರು ಚುನಾವಣಾಧಿಕಾರಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಂತಾ ಮದರಿ ಬೆಂಬಲಿಗರಾದ ಗುರುಲಿಂಗಪ್ಪ ಸುಲ್ಲಳ್ಳಿ, ವೀರೇಶ ಮದರಿ,ಚಂದ್ರಶೇಖರ ಪಾಟೀಲ್ ಮತ್ತಿತರರು, ಅವಧಿ ಮುಗಿದ ನಂತರ ದಾಖಲೆಗಳನ್ನು ಸ್ವೀಕರಿಸಬಾರದು ಎಂದು ಚುನಾವಣಾಧಿಕಾರಿಯೊಂದಿಗೆ ವಾಗ್ವಾದ ಮಾಡಿದ್ದೇವೆ.ನಾಮಪತ್ರ ಸಲ್ಲಿಕೆ ಅವಧಿಯ ಒಳಗಡೆ ಸಲ್ಲಿಸಿದ ದಾಖಲೆಗಳನ್ನು ಮಾತ್ರ ಪರಿಗಣಿಸಬೇಕು.ನಿಯಮಾನುಸಾರ ಜಾತಿ ಪ್ರಮಾಣ ಪತ್ರ ಸಲ್ಲಿಸದ ಶಿರಗುಪ್ಪಿ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಬಸವರಾಜ ತಡಸದ, ಗುರು ಹೊನ್ನಳ್ಳಿ, ಬಸವರಾಜ ಮದರಿ, ಆದೇಶ ಕೋಳೂರು ಇದ್ದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ