ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ಮುದ್ದೇಬಿಹಾಳ : ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಬೇಕಾದ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯಲ್ಲಿ ಸಲ್ಲಿಸದೇ ಅವಧಿ ಮುಗಿದ ಬಳಿಕ ಸಲ್ಲಿಸಲು ಮುಂದಾದ ಅಭ್ಯರ್ಥಿಯ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾದ ಚುನಾವಣಾಧಿಕಾರಿಯೊಂದಿಗೆ ಇನ್ನೋರ್ವ ಅಭ್ಯರ್ಥಿಯ ಬೆಂಬಲಿಗರು ವಾಗ್ವಾದ ನಡೆಸಿದ ಘಟನೆ ತಾಲ್ಲೂಕಿನ ಕುಂಟೋಜಿಯಲ್ಲಿ ಮಂಗಳವಾರ ನಡೆದಿದೆ.

ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯ ಮೂರನೇ ವಾರ್ಡ್’ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. 3ಬಿ ವರ್ಗ ಮಹಿಳಾ ಮೀಸಲಾತಿಗೆ ಸಿಮೀತವಾಗಿದ್ದ ಸ್ಥಾನಕ್ಕೆ ಕುಂಟೋಜಿಯ ಶಾಂತಾ ವೀರೇಶ ಮದರಿ ಹಾಗೂ ಕವಿತಾ ಹಣಮಂತ್ರಾಯ ಶಿರಗುಪ್ಪಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕವಿತಾ ಶಿರಗುಪ್ಪಿ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸದೇ ಇರುವುದು ಕಂಡು ಬಂದಿದೆ. ನಾಮಪತ್ರ ಸ್ವೀಕಾರದ ಅವಧಿ ಮುಗಿದ ನಂತರ ಜಾತಿ ಪ್ರಮಾಣ ಪತ್ರವನ್ನು ಅಭ್ಯರ್ಥಿ ಕವಿತಾ ಅವರು ತಮ್ಮ ಬೆಂಬಲಿಗರಿಂದ ಪಡೆದು ಚುನಾವಣಾಧಿಕಾರಿಗೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಂತಾ ಮದರಿ ಹಾಗೂ ಬೆಂಬಲಿಗರು ಚುನಾವಣಾಧಿಕಾರಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಂತಾ ಮದರಿ ಬೆಂಬಲಿಗರಾದ ಗುರುಲಿಂಗಪ್ಪ ಸುಲ್ಲಳ್ಳಿ, ವೀರೇಶ ಮದರಿ,ಚಂದ್ರಶೇಖರ ಪಾಟೀಲ್ ಮತ್ತಿತರರು, ಅವಧಿ ಮುಗಿದ ನಂತರ ದಾಖಲೆಗಳನ್ನು ಸ್ವೀಕರಿಸಬಾರದು ಎಂದು ಚುನಾವಣಾಧಿಕಾರಿಯೊಂದಿಗೆ ವಾಗ್ವಾದ ಮಾಡಿದ್ದೇವೆ.ನಾಮಪತ್ರ ಸಲ್ಲಿಕೆ ಅವಧಿಯ ಒಳಗಡೆ ಸಲ್ಲಿಸಿದ ದಾಖಲೆಗಳನ್ನು ಮಾತ್ರ ಪರಿಗಣಿಸಬೇಕು.ನಿಯಮಾನುಸಾರ ಜಾತಿ ಪ್ರಮಾಣ ಪತ್ರ ಸಲ್ಲಿಸದ ಶಿರಗುಪ್ಪಿ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಬಸವರಾಜ ತಡಸದ, ಗುರು ಹೊನ್ನಳ್ಳಿ, ಬಸವರಾಜ ಮದರಿ, ಆದೇಶ ಕೋಳೂರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ