ಮುದ್ದೇಬಿಹಾಳ : ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಬೇಕಾದ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯಲ್ಲಿ ಸಲ್ಲಿಸದೇ ಅವಧಿ ಮುಗಿದ ಬಳಿಕ ಸಲ್ಲಿಸಲು ಮುಂದಾದ ಅಭ್ಯರ್ಥಿಯ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾದ ಚುನಾವಣಾಧಿಕಾರಿಯೊಂದಿಗೆ ಇನ್ನೋರ್ವ ಅಭ್ಯರ್ಥಿಯ ಬೆಂಬಲಿಗರು ವಾಗ್ವಾದ ನಡೆಸಿದ ಘಟನೆ ತಾಲ್ಲೂಕಿನ ಕುಂಟೋಜಿಯಲ್ಲಿ ಮಂಗಳವಾರ ನಡೆದಿದೆ.
ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯ ಮೂರನೇ ವಾರ್ಡ್’ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. 3ಬಿ ವರ್ಗ ಮಹಿಳಾ ಮೀಸಲಾತಿಗೆ ಸಿಮೀತವಾಗಿದ್ದ ಸ್ಥಾನಕ್ಕೆ ಕುಂಟೋಜಿಯ ಶಾಂತಾ ವೀರೇಶ ಮದರಿ ಹಾಗೂ ಕವಿತಾ ಹಣಮಂತ್ರಾಯ ಶಿರಗುಪ್ಪಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕವಿತಾ ಶಿರಗುಪ್ಪಿ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸದೇ ಇರುವುದು ಕಂಡು ಬಂದಿದೆ. ನಾಮಪತ್ರ ಸ್ವೀಕಾರದ ಅವಧಿ ಮುಗಿದ ನಂತರ ಜಾತಿ ಪ್ರಮಾಣ ಪತ್ರವನ್ನು ಅಭ್ಯರ್ಥಿ ಕವಿತಾ ಅವರು ತಮ್ಮ ಬೆಂಬಲಿಗರಿಂದ ಪಡೆದು ಚುನಾವಣಾಧಿಕಾರಿಗೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಂತಾ ಮದರಿ ಹಾಗೂ ಬೆಂಬಲಿಗರು ಚುನಾವಣಾಧಿಕಾರಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಂತಾ ಮದರಿ ಬೆಂಬಲಿಗರಾದ ಗುರುಲಿಂಗಪ್ಪ ಸುಲ್ಲಳ್ಳಿ, ವೀರೇಶ ಮದರಿ,ಚಂದ್ರಶೇಖರ ಪಾಟೀಲ್ ಮತ್ತಿತರರು, ಅವಧಿ ಮುಗಿದ ನಂತರ ದಾಖಲೆಗಳನ್ನು ಸ್ವೀಕರಿಸಬಾರದು ಎಂದು ಚುನಾವಣಾಧಿಕಾರಿಯೊಂದಿಗೆ ವಾಗ್ವಾದ ಮಾಡಿದ್ದೇವೆ.ನಾಮಪತ್ರ ಸಲ್ಲಿಕೆ ಅವಧಿಯ ಒಳಗಡೆ ಸಲ್ಲಿಸಿದ ದಾಖಲೆಗಳನ್ನು ಮಾತ್ರ ಪರಿಗಣಿಸಬೇಕು.ನಿಯಮಾನುಸಾರ ಜಾತಿ ಪ್ರಮಾಣ ಪತ್ರ ಸಲ್ಲಿಸದ ಶಿರಗುಪ್ಪಿ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಬಸವರಾಜ ತಡಸದ, ಗುರು ಹೊನ್ನಳ್ಳಿ, ಬಸವರಾಜ ಮದರಿ, ಆದೇಶ ಕೋಳೂರು ಇದ್ದರು.
ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ
ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ
Latest News
ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ
ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ
ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ
ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ
ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04
ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ
ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ
ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ
ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ
ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.
ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ







