ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅವಧಿಯಲ್ಲಿ ನಡೆದಿದೆ ಎನ್ನಲಾದ ಕಮೀಟಿಯ ಆಸ್ತಿ ಹಾಗೂ ಹಣಕಾಸಿನ ಎಲ್ಲ ವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ವಕೀಲ ಎನ್.ಆರ್.ಮೊಕಾಶಿ ಆಗ್ರಹಿಸಿದರು.

ಪಟ್ಟಣದ ಹುಡ್ಕೋ ಹೇಮರಡ್ಡಿ ಸರ್ಕಲ್ ಬಳಿ ಇರುವ ಮದರಿ ಕಾಂಪ್ಲೆಕ್ಸ್ನಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಅಂಜುಮನ್ ಕಮೀಟಿಯ ಹೆಸರಿನ ಅಂಗಡಿಗಳನ್ನು ಒಬ್ಬೊಬ್ಬ ಸದಸ್ಯರು ಎರಡ್ಮೂರು ಅಂಗಡಿಗಳನ್ನು ಪಡೆದುಕೊಂಡು ಬೇರೆಯವರಿಗೆ ಹೆಚ್ಚಿನ ಬಾಡಿಗೆಗೆ ಕೊಟ್ಟಿದ್ದಾರೆ.ಆಡಳಿತಾಧಿಕಾರಿ ನೇಮಕವಾಗಿದ್ದರೂ ಅವರು ಸಂಸ್ಥೆಯ ವ್ಯವಹಾರಗಳನ್ನು ಪಾರದರ್ಶಕವಾಗಿ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಅಂಜುಮನ್ ಇಸ್ಲಾಂ ಕಮೀಟಿಯ ಅಡಿಯಲ್ಲಿ ಅನುದಾನಿತ ಪ್ರೌಢಶಾಲೆ,ಐಟಿಐ ಕಾಲೇಜುಗಳಿದ್ದರೂ ಅಲ್ಲಿ ನಿರೀಕ್ಷಿತ ಸಂಖ್ಯೆಯಲ್ಲಿ ಸಮಾಜದ ಮಕ್ಕಳು ಇಲ್ಲ.ಗುಣಮಟ್ಟದ ಶಿಕ್ಷಣ ದೊರೆಯದ ಕಾರಣ ಬೇರೆ ಕಡೆ ಖಾಸಗಿಯವರ ಬಳಿ ಹೆಚ್ಚಿನ ಹಣ ಕೊಟ್ಟು ಮಕ್ಕಳು ಓದುವ ಪರಿಸ್ಥಿತಿ ಇದೆ ಎಂದು ಹೇಳಿದರಲ್ಲದೇ ನಮ್ಮ ಆರೋಪ ಯಾವುದೇ ವ್ಯಕ್ತಿ ಪರ,ವಿರುದ್ಧವಲ್ಲ ಎಂದು ಹೇಳಿದರು.

ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡ ಮಹೆಬೂಬ ಹಡಲಗೇರಿ ಮಾತನಾಡಿ, ಅಂಜುಮನ್ ಇಸ್ಲಾಂ ಕಮೀಟಿಯ ಹೆಸರಿನಲ್ಲಿ ಬಿದರಕುಂದಿಯ ಸರ್ವೆ ನಂ.180/6/2ರಲ್ಲಿ 1.15 ಎಕರೆ ಜಮೀನು ಖಾಸಗಿ ವ್ಯಕ್ತಿಗಳಿಗೆ ಮಾರಾಟಕ್ಕೆ ಮುಂದಾಗಿದ್ದು ಅದನ್ನು ತನಿಖೆಗೆ ಒಳಪಡಿಸುವಂತೆ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.ಮುಸ್ಲಿಂ ಸಮಾಜದ ಖಬರಸ್ಥಾನದ ಅಭಿವೃದ್ಧಿಗೆ ಸಮಾಜದವರಿಂದ ಸಂಗ್ರಹಿಸಿದ್ದ ಅಂದಾಜು 30 ಲಕ್ಷ ರೂ.ಗಳನ್ನು ಹಿಂದಿನ ಅಧ್ಯಕ್ಷರು ತಮ್ಮ ಹೆಸರಿನಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಜಮಾ ಮಾಡಿಕೊಂಡಿದ್ದಾರೆ ಎಂದು ದೂರಿದರು.

ವಕೀಲ ಶಬ್ಬೀರ ಬಾಗಲಕೋಟ ಮಾತನಾಡಿ, ಅಂಜುಮನ್ ಸಂಸ್ಥೆಯ ಲೆಕ್ಕಪತ್ರಗಳನ್ನು ಸರಿಯಾಗಿ ಇಡದ ಕಾರಣ ತೆರಿಗೆ ಇಲಾಖೆಯಿಂದ 42 ಲಕ್ಷ ರೂ.ದಂಡ ಹಾಕಲಾಗಿದೆ.ಜು.,2025ರಿಂದ ಸಂಸ್ಥೆಯ ಬ್ಯಾಂಕ್ ಖಾತೆಗಳು ನಿಷ್ಕಿçÃಯವಾಗಿವೆ.2019-20ರಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 50 ಲಕ್ಷ ರೂ.ಮಂಜೂರಾತಿ ದೊರೆತಿದ್ದು ಅದರಲ್ಲಿ ಒಂದನೇ ಕಂತಾಗಿ 25 ಲಕ್ಷ ರೂ.ಬಿಡುಗಡೆ ಆಗಿತ್ತು.ಅದರಲ್ಲಿ 12,33,880 ರೂ.ಬಳಕೆ ಮಾಡಿಕೊಂಡಿದ್ದು ಬಾಕಿ ಉಳಿದ 12,66,120 ಗಳ ಕುರಿತು ಆಡಳಿತ ಮಂಡಳಿ ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ದೂರಿದರು.

ಮಹೆಬೂಬ ನಗರದ ನಿವಾಸಿ ಮಹ್ಮದ ನಾಗರಾಳ ಮಾತನಾಡಿ, ಅಂಜುಮನ್ ಕಮೀಟಿಯ ಅವ್ಯವಹಾರದ ಕುರಿತು ಧ್ವನಿ ಎತ್ತುವವರ ವಿರುದ್ದ ಹಿಂದಿನ ಆಡಳಿತ ಮಂಡಳಿಯವರು ಹೊಡೆಯಲು ಬರುತ್ತಾರೆ.ಅಂತವರ ಧ್ವನಿ ಅಡಗಿಸಲು ಗುಂಪುಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದರು.

ವಕೀಲ ಎಂ.ಎ.ಲಿAಗಸೂರು ಮಾತನಾಡಿ,ಅಂಜುಮನ್ ಕಮೀಟಿ ಆಡಳಿತಾಧಿಕಾರಿ ತಬಸ್ಸುಮ ಮಹೇಷವಾಡಗಿ ಸಂಸ್ಥೆಯ ಮೇಲಿನ ಎಲ್ಲ ಲೆಕ್ಕಪತ್ರಗಳ ಬಗ್ಗೆ ನಿಗಾವಹಿಸಿದ ಹಿಂದಿನ ಆಡಳಿತ ಮಂಡಳಿ ಅಣತಿಯಂತೆ ನಡೆದುಕೊಳ್ಳುತ್ತಿರುವುದು ಸಾಮಾನ್ಯ ಮುಸ್ಲಿಂ ಜನಾಂಗಕ್ಕೆ ಅನ್ಯಾಯವಾಗುತ್ತಿದೆ.ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದ್ದು ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡರಾದ ಯಾಸೀನ ಸೋಠೆ, ವಕೀಲ ಎಂ.ಸಿ.ಮ್ಯಾಗೇರಿ,ಹುಸೇನಭಾಷಾ ಹುಣಚಗಿ,ಅಲ್ಲಾಭಕ್ಷö್ಯ ಶಿರೋಳ,ಅಬ್ದುಲಮಜೀದ ಶಿರೋಳ ಮೊದಲಾದವರು ಇದ್ದರು.

ಸಚಿವರಿಗೂ ದೂರು ಕೊಟ್ಟರೂ ಕ್ರಮವಿಲ್ಲ:
ಅಲ್ಪಸಂಖ್ಯಾತ,ಹಜ್ ಹಾಗೂ ವಕ್ಭ್ ಸಚಿವ ಜಮೀರ್‌ಅಹ್ಮದ ಖಾನ್ ಅವರಿಗೆ ಸಂಸ್ಥೆಯ ಅವ್ಯವಹಾರಗಳು ಕುರಿತು ಸಮಗ್ರ ಮಾಹಿತಿ ಸಲ್ಲಿಸಿದ್ದರೂ ಯಾವುದೆ ಕ್ರಮ ಜರುಗಿಸಿಲ್ಲ ಎಂದು ಮುಖಂಡ ಮಹೆಬೂಬ ಹಡಲಗೇರಿ ಆರೋಪಿಸಿದರು.

Latest News

ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ:                               ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ: ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಮುದ್ದೇಬಿಹಾಳ : ಈಚೇಗೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಚಿನ್ನದ ಅಂಗಡಿ ಕಳ್ಳತನ ಪ್ರಕರಣ ವರದಿಯಾದ

ALERT : ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಪದೇ ಪದೇ ಟೀ’ ಬಿಸಿ ಮಾಡಿ ಕುಡಿಯುವುದು ವಿಷಕ್ಕೆ ಸಮ!

ALERT : ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಪದೇ ಪದೇ ಟೀ’ ಬಿಸಿ ಮಾಡಿ ಕುಡಿಯುವುದು ವಿಷಕ್ಕೆ ಸಮ!

ಬೆಂಗಳೂರು: ಇತ್ತೀಚಿನ ಅಧ್ಯಯನಗಳ ಪ್ರಕಾರ, ಚಹಾ ಕುಡಿದ 15 ರಿಂದ 20 ನಿಮಿಷಗಳ ಒಳಗೆ

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ;          ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದ 2026 ನೇ ಸಾಲಿನ ನೂತನ

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಹೀರೋ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು,

ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಮುದ್ದೇಬಿಹಾಳ : ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿ ಹತ್ಯೆಗೈದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಡಿಎಸ್‌ಎಸ್ ಕಾದ್ರೋಳ್ಳಿ ಬಣದ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಸಂಘಟನೆ ಮುಖಂಡರು ಶಿರಸ್ತೇದಾರ ಎ.ಬಿ.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು ಎಂಬ ಕಾರಣಕ್ಕೆ ಆಕೆಯ ತಂದೆ ಹಾಗೂ ಇತರರು ಸೇರಿ ಗರ್ಭಿಣಿಯನ್ನು ಹತ್ಯೆ ಮಾಡಿದ

ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ನೂತನ ಪದಾಧಿಕಾರಿಗಳನ್ನು ಭಾನುವಾರ ಆಯ್ಕೆ ಮಾಡಲಾಯಿತು. ಪಟ್ಟಣದ ಬಸವ ನಗರದ ಅಂಬಾಭವಾನಿ ಮಂದಿರದಲ್ಲಿ ಜರುಗಿದ ಸಭೆಯಲ್ಲಿ ಸಮಾಜದ ಗೌರವಾಧ್ಯಕ್ಷರನ್ನಾಗಿ ರಾಜೇಂದ್ರ ಭೋಸಲೆ, ನೂತನ ಅಧ್ಯಕ್ಷರಾಗಿ ನೇತಾಜಿ ನಲವಡೆ, ಉಪಾಧ್ಯಕ್ಷರನ್ನಾಗಿ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಪ್ರದಾನ ಕಾರ್ಯದರ್ಶಿಯಾಗಿ ಡಾ. ಕೃಷ್ಣಾಜಿ ಪವಾರ, ಸಹ ಕಾರ್ಯದರ್ಶಿಯನ್ನಾಗಿ ಹಣಮಂತ ನಲವಡೆ ಹಾಗೂ ಖಜಾಂಚಿಯನ್ನಾಗಿ ರಮೇಶ ಥೋರಾತ, ಸಹ ಖಜಾಂಚಿಯನ್ನಾಗಿ ಅನೀಲ ಪವಾರ,ಸಂಘಟನಾ ಕಾರ್ಯದರ್ಶಿಯನ್ನಾಗಿ ಸಂತೋಷ