ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅವಧಿಯಲ್ಲಿ ನಡೆದಿದೆ ಎನ್ನಲಾದ ಕಮೀಟಿಯ ಆಸ್ತಿ ಹಾಗೂ ಹಣಕಾಸಿನ ಎಲ್ಲ ವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ವಕೀಲ ಎನ್.ಆರ್.ಮೊಕಾಶಿ ಆಗ್ರಹಿಸಿದರು.

ಪಟ್ಟಣದ ಹುಡ್ಕೋ ಹೇಮರಡ್ಡಿ ಸರ್ಕಲ್ ಬಳಿ ಇರುವ ಮದರಿ ಕಾಂಪ್ಲೆಕ್ಸ್ನಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಅಂಜುಮನ್ ಕಮೀಟಿಯ ಹೆಸರಿನ ಅಂಗಡಿಗಳನ್ನು ಒಬ್ಬೊಬ್ಬ ಸದಸ್ಯರು ಎರಡ್ಮೂರು ಅಂಗಡಿಗಳನ್ನು ಪಡೆದುಕೊಂಡು ಬೇರೆಯವರಿಗೆ ಹೆಚ್ಚಿನ ಬಾಡಿಗೆಗೆ ಕೊಟ್ಟಿದ್ದಾರೆ.ಆಡಳಿತಾಧಿಕಾರಿ ನೇಮಕವಾಗಿದ್ದರೂ ಅವರು ಸಂಸ್ಥೆಯ ವ್ಯವಹಾರಗಳನ್ನು ಪಾರದರ್ಶಕವಾಗಿ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಅಂಜುಮನ್ ಇಸ್ಲಾಂ ಕಮೀಟಿಯ ಅಡಿಯಲ್ಲಿ ಅನುದಾನಿತ ಪ್ರೌಢಶಾಲೆ,ಐಟಿಐ ಕಾಲೇಜುಗಳಿದ್ದರೂ ಅಲ್ಲಿ ನಿರೀಕ್ಷಿತ ಸಂಖ್ಯೆಯಲ್ಲಿ ಸಮಾಜದ ಮಕ್ಕಳು ಇಲ್ಲ.ಗುಣಮಟ್ಟದ ಶಿಕ್ಷಣ ದೊರೆಯದ ಕಾರಣ ಬೇರೆ ಕಡೆ ಖಾಸಗಿಯವರ ಬಳಿ ಹೆಚ್ಚಿನ ಹಣ ಕೊಟ್ಟು ಮಕ್ಕಳು ಓದುವ ಪರಿಸ್ಥಿತಿ ಇದೆ ಎಂದು ಹೇಳಿದರಲ್ಲದೇ ನಮ್ಮ ಆರೋಪ ಯಾವುದೇ ವ್ಯಕ್ತಿ ಪರ,ವಿರುದ್ಧವಲ್ಲ ಎಂದು ಹೇಳಿದರು.

ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡ ಮಹೆಬೂಬ ಹಡಲಗೇರಿ ಮಾತನಾಡಿ, ಅಂಜುಮನ್ ಇಸ್ಲಾಂ ಕಮೀಟಿಯ ಹೆಸರಿನಲ್ಲಿ ಬಿದರಕುಂದಿಯ ಸರ್ವೆ ನಂ.180/6/2ರಲ್ಲಿ 1.15 ಎಕರೆ ಜಮೀನು ಖಾಸಗಿ ವ್ಯಕ್ತಿಗಳಿಗೆ ಮಾರಾಟಕ್ಕೆ ಮುಂದಾಗಿದ್ದು ಅದನ್ನು ತನಿಖೆಗೆ ಒಳಪಡಿಸುವಂತೆ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.ಮುಸ್ಲಿಂ ಸಮಾಜದ ಖಬರಸ್ಥಾನದ ಅಭಿವೃದ್ಧಿಗೆ ಸಮಾಜದವರಿಂದ ಸಂಗ್ರಹಿಸಿದ್ದ ಅಂದಾಜು 30 ಲಕ್ಷ ರೂ.ಗಳನ್ನು ಹಿಂದಿನ ಅಧ್ಯಕ್ಷರು ತಮ್ಮ ಹೆಸರಿನಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಜಮಾ ಮಾಡಿಕೊಂಡಿದ್ದಾರೆ ಎಂದು ದೂರಿದರು.

ವಕೀಲ ಶಬ್ಬೀರ ಬಾಗಲಕೋಟ ಮಾತನಾಡಿ, ಅಂಜುಮನ್ ಸಂಸ್ಥೆಯ ಲೆಕ್ಕಪತ್ರಗಳನ್ನು ಸರಿಯಾಗಿ ಇಡದ ಕಾರಣ ತೆರಿಗೆ ಇಲಾಖೆಯಿಂದ 42 ಲಕ್ಷ ರೂ.ದಂಡ ಹಾಕಲಾಗಿದೆ.ಜು.,2025ರಿಂದ ಸಂಸ್ಥೆಯ ಬ್ಯಾಂಕ್ ಖಾತೆಗಳು ನಿಷ್ಕಿçÃಯವಾಗಿವೆ.2019-20ರಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 50 ಲಕ್ಷ ರೂ.ಮಂಜೂರಾತಿ ದೊರೆತಿದ್ದು ಅದರಲ್ಲಿ ಒಂದನೇ ಕಂತಾಗಿ 25 ಲಕ್ಷ ರೂ.ಬಿಡುಗಡೆ ಆಗಿತ್ತು.ಅದರಲ್ಲಿ 12,33,880 ರೂ.ಬಳಕೆ ಮಾಡಿಕೊಂಡಿದ್ದು ಬಾಕಿ ಉಳಿದ 12,66,120 ಗಳ ಕುರಿತು ಆಡಳಿತ ಮಂಡಳಿ ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ದೂರಿದರು.

ಮಹೆಬೂಬ ನಗರದ ನಿವಾಸಿ ಮಹ್ಮದ ನಾಗರಾಳ ಮಾತನಾಡಿ, ಅಂಜುಮನ್ ಕಮೀಟಿಯ ಅವ್ಯವಹಾರದ ಕುರಿತು ಧ್ವನಿ ಎತ್ತುವವರ ವಿರುದ್ದ ಹಿಂದಿನ ಆಡಳಿತ ಮಂಡಳಿಯವರು ಹೊಡೆಯಲು ಬರುತ್ತಾರೆ.ಅಂತವರ ಧ್ವನಿ ಅಡಗಿಸಲು ಗುಂಪುಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದರು.

ವಕೀಲ ಎಂ.ಎ.ಲಿAಗಸೂರು ಮಾತನಾಡಿ,ಅಂಜುಮನ್ ಕಮೀಟಿ ಆಡಳಿತಾಧಿಕಾರಿ ತಬಸ್ಸುಮ ಮಹೇಷವಾಡಗಿ ಸಂಸ್ಥೆಯ ಮೇಲಿನ ಎಲ್ಲ ಲೆಕ್ಕಪತ್ರಗಳ ಬಗ್ಗೆ ನಿಗಾವಹಿಸಿದ ಹಿಂದಿನ ಆಡಳಿತ ಮಂಡಳಿ ಅಣತಿಯಂತೆ ನಡೆದುಕೊಳ್ಳುತ್ತಿರುವುದು ಸಾಮಾನ್ಯ ಮುಸ್ಲಿಂ ಜನಾಂಗಕ್ಕೆ ಅನ್ಯಾಯವಾಗುತ್ತಿದೆ.ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದ್ದು ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡರಾದ ಯಾಸೀನ ಸೋಠೆ, ವಕೀಲ ಎಂ.ಸಿ.ಮ್ಯಾಗೇರಿ,ಹುಸೇನಭಾಷಾ ಹುಣಚಗಿ,ಅಲ್ಲಾಭಕ್ಷö್ಯ ಶಿರೋಳ,ಅಬ್ದುಲಮಜೀದ ಶಿರೋಳ ಮೊದಲಾದವರು ಇದ್ದರು.

ಸಚಿವರಿಗೂ ದೂರು ಕೊಟ್ಟರೂ ಕ್ರಮವಿಲ್ಲ:
ಅಲ್ಪಸಂಖ್ಯಾತ,ಹಜ್ ಹಾಗೂ ವಕ್ಭ್ ಸಚಿವ ಜಮೀರ್‌ಅಹ್ಮದ ಖಾನ್ ಅವರಿಗೆ ಸಂಸ್ಥೆಯ ಅವ್ಯವಹಾರಗಳು ಕುರಿತು ಸಮಗ್ರ ಮಾಹಿತಿ ಸಲ್ಲಿಸಿದ್ದರೂ ಯಾವುದೆ ಕ್ರಮ ಜರುಗಿಸಿಲ್ಲ ಎಂದು ಮುಖಂಡ ಮಹೆಬೂಬ ಹಡಲಗೇರಿ ಆರೋಪಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ