ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅವಧಿಯಲ್ಲಿ ನಡೆದಿದೆ ಎನ್ನಲಾದ ಕಮೀಟಿಯ ಆಸ್ತಿ ಹಾಗೂ ಹಣಕಾಸಿನ ಎಲ್ಲ ವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ವಕೀಲ ಎನ್.ಆರ್.ಮೊಕಾಶಿ ಆಗ್ರಹಿಸಿದರು.

ಪಟ್ಟಣದ ಹುಡ್ಕೋ ಹೇಮರಡ್ಡಿ ಸರ್ಕಲ್ ಬಳಿ ಇರುವ ಮದರಿ ಕಾಂಪ್ಲೆಕ್ಸ್ನಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಅಂಜುಮನ್ ಕಮೀಟಿಯ ಹೆಸರಿನ ಅಂಗಡಿಗಳನ್ನು ಒಬ್ಬೊಬ್ಬ ಸದಸ್ಯರು ಎರಡ್ಮೂರು ಅಂಗಡಿಗಳನ್ನು ಪಡೆದುಕೊಂಡು ಬೇರೆಯವರಿಗೆ ಹೆಚ್ಚಿನ ಬಾಡಿಗೆಗೆ ಕೊಟ್ಟಿದ್ದಾರೆ.ಆಡಳಿತಾಧಿಕಾರಿ ನೇಮಕವಾಗಿದ್ದರೂ ಅವರು ಸಂಸ್ಥೆಯ ವ್ಯವಹಾರಗಳನ್ನು ಪಾರದರ್ಶಕವಾಗಿ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಅಂಜುಮನ್ ಇಸ್ಲಾಂ ಕಮೀಟಿಯ ಅಡಿಯಲ್ಲಿ ಅನುದಾನಿತ ಪ್ರೌಢಶಾಲೆ,ಐಟಿಐ ಕಾಲೇಜುಗಳಿದ್ದರೂ ಅಲ್ಲಿ ನಿರೀಕ್ಷಿತ ಸಂಖ್ಯೆಯಲ್ಲಿ ಸಮಾಜದ ಮಕ್ಕಳು ಇಲ್ಲ.ಗುಣಮಟ್ಟದ ಶಿಕ್ಷಣ ದೊರೆಯದ ಕಾರಣ ಬೇರೆ ಕಡೆ ಖಾಸಗಿಯವರ ಬಳಿ ಹೆಚ್ಚಿನ ಹಣ ಕೊಟ್ಟು ಮಕ್ಕಳು ಓದುವ ಪರಿಸ್ಥಿತಿ ಇದೆ ಎಂದು ಹೇಳಿದರಲ್ಲದೇ ನಮ್ಮ ಆರೋಪ ಯಾವುದೇ ವ್ಯಕ್ತಿ ಪರ,ವಿರುದ್ಧವಲ್ಲ ಎಂದು ಹೇಳಿದರು.

ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡ ಮಹೆಬೂಬ ಹಡಲಗೇರಿ ಮಾತನಾಡಿ, ಅಂಜುಮನ್ ಇಸ್ಲಾಂ ಕಮೀಟಿಯ ಹೆಸರಿನಲ್ಲಿ ಬಿದರಕುಂದಿಯ ಸರ್ವೆ ನಂ.180/6/2ರಲ್ಲಿ 1.15 ಎಕರೆ ಜಮೀನು ಖಾಸಗಿ ವ್ಯಕ್ತಿಗಳಿಗೆ ಮಾರಾಟಕ್ಕೆ ಮುಂದಾಗಿದ್ದು ಅದನ್ನು ತನಿಖೆಗೆ ಒಳಪಡಿಸುವಂತೆ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.ಮುಸ್ಲಿಂ ಸಮಾಜದ ಖಬರಸ್ಥಾನದ ಅಭಿವೃದ್ಧಿಗೆ ಸಮಾಜದವರಿಂದ ಸಂಗ್ರಹಿಸಿದ್ದ ಅಂದಾಜು 30 ಲಕ್ಷ ರೂ.ಗಳನ್ನು ಹಿಂದಿನ ಅಧ್ಯಕ್ಷರು ತಮ್ಮ ಹೆಸರಿನಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಜಮಾ ಮಾಡಿಕೊಂಡಿದ್ದಾರೆ ಎಂದು ದೂರಿದರು.

ವಕೀಲ ಶಬ್ಬೀರ ಬಾಗಲಕೋಟ ಮಾತನಾಡಿ, ಅಂಜುಮನ್ ಸಂಸ್ಥೆಯ ಲೆಕ್ಕಪತ್ರಗಳನ್ನು ಸರಿಯಾಗಿ ಇಡದ ಕಾರಣ ತೆರಿಗೆ ಇಲಾಖೆಯಿಂದ 42 ಲಕ್ಷ ರೂ.ದಂಡ ಹಾಕಲಾಗಿದೆ.ಜು.,2025ರಿಂದ ಸಂಸ್ಥೆಯ ಬ್ಯಾಂಕ್ ಖಾತೆಗಳು ನಿಷ್ಕಿçÃಯವಾಗಿವೆ.2019-20ರಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 50 ಲಕ್ಷ ರೂ.ಮಂಜೂರಾತಿ ದೊರೆತಿದ್ದು ಅದರಲ್ಲಿ ಒಂದನೇ ಕಂತಾಗಿ 25 ಲಕ್ಷ ರೂ.ಬಿಡುಗಡೆ ಆಗಿತ್ತು.ಅದರಲ್ಲಿ 12,33,880 ರೂ.ಬಳಕೆ ಮಾಡಿಕೊಂಡಿದ್ದು ಬಾಕಿ ಉಳಿದ 12,66,120 ಗಳ ಕುರಿತು ಆಡಳಿತ ಮಂಡಳಿ ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ದೂರಿದರು.

ಮಹೆಬೂಬ ನಗರದ ನಿವಾಸಿ ಮಹ್ಮದ ನಾಗರಾಳ ಮಾತನಾಡಿ, ಅಂಜುಮನ್ ಕಮೀಟಿಯ ಅವ್ಯವಹಾರದ ಕುರಿತು ಧ್ವನಿ ಎತ್ತುವವರ ವಿರುದ್ದ ಹಿಂದಿನ ಆಡಳಿತ ಮಂಡಳಿಯವರು ಹೊಡೆಯಲು ಬರುತ್ತಾರೆ.ಅಂತವರ ಧ್ವನಿ ಅಡಗಿಸಲು ಗುಂಪುಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದರು.

ವಕೀಲ ಎಂ.ಎ.ಲಿAಗಸೂರು ಮಾತನಾಡಿ,ಅಂಜುಮನ್ ಕಮೀಟಿ ಆಡಳಿತಾಧಿಕಾರಿ ತಬಸ್ಸುಮ ಮಹೇಷವಾಡಗಿ ಸಂಸ್ಥೆಯ ಮೇಲಿನ ಎಲ್ಲ ಲೆಕ್ಕಪತ್ರಗಳ ಬಗ್ಗೆ ನಿಗಾವಹಿಸಿದ ಹಿಂದಿನ ಆಡಳಿತ ಮಂಡಳಿ ಅಣತಿಯಂತೆ ನಡೆದುಕೊಳ್ಳುತ್ತಿರುವುದು ಸಾಮಾನ್ಯ ಮುಸ್ಲಿಂ ಜನಾಂಗಕ್ಕೆ ಅನ್ಯಾಯವಾಗುತ್ತಿದೆ.ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದ್ದು ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಅಂಜುಮನ್ ಹಿತರಕ್ಷಣಾ ವೇದಿಕೆ ಮುಖಂಡರಾದ ಯಾಸೀನ ಸೋಠೆ, ವಕೀಲ ಎಂ.ಸಿ.ಮ್ಯಾಗೇರಿ,ಹುಸೇನಭಾಷಾ ಹುಣಚಗಿ,ಅಲ್ಲಾಭಕ್ಷö್ಯ ಶಿರೋಳ,ಅಬ್ದುಲಮಜೀದ ಶಿರೋಳ ಮೊದಲಾದವರು ಇದ್ದರು.

ಸಚಿವರಿಗೂ ದೂರು ಕೊಟ್ಟರೂ ಕ್ರಮವಿಲ್ಲ:
ಅಲ್ಪಸಂಖ್ಯಾತ,ಹಜ್ ಹಾಗೂ ವಕ್ಭ್ ಸಚಿವ ಜಮೀರ್‌ಅಹ್ಮದ ಖಾನ್ ಅವರಿಗೆ ಸಂಸ್ಥೆಯ ಅವ್ಯವಹಾರಗಳು ಕುರಿತು ಸಮಗ್ರ ಮಾಹಿತಿ ಸಲ್ಲಿಸಿದ್ದರೂ ಯಾವುದೆ ಕ್ರಮ ಜರುಗಿಸಿಲ್ಲ ಎಂದು ಮುಖಂಡ ಮಹೆಬೂಬ ಹಡಲಗೇರಿ ಆರೋಪಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,