Demand for money-disclose document to allegation-challenge of Dalit leaders

ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾನೊಬ್ಬ ನಿಜವಾದ ಮುಸ್ಲಿಂನಾಗಿದ್ದರೆ ಖುರಾನ್ ಗ್ರಂಥದ ಮೇಲೆ ಪ್ರಮಾಣ ಮಾಡಿ ದಲಿತ ಮುಖಂಡರ ಮೇಲೆ ಮಾಡಿದ ಹಣಕ್ಕೆ ಬೇಡಿಕೆ ಇರಿಸಿದ ಆರೋಪಕ್ಕೆ ಮೊದಲು ಜನರ ಎದುರಿಗೆ ದಾಖಲೆಗಳನ್ನು ಬಹಿರಂಗಪಡಿಸಿ ಮಾತನಾಡುವುದನ್ನು ಕಲಿತುಕೊಳ್ಳಲಿ ಎಂದು ದಲಿತ ಸಮಾಜದ ಮುಖಂಡರು ಸವಾಲು ಹಾಕಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯದ ಕುರಿತು ಮಾತನಾಡಿದರು.

ಪಟ್ಟಣದ ತಾಪಂ ವಸತಿ ಗೃಹಗಳು, ಸಾಮರ್ಥ್ಯ ಸೌಧ ನೆಲಸಮ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ದಲಿತ ಮುಖಂಡರ ಮೇಲೆ ಮಾಡಿದ ಆರೋಪವನ್ನು ಖಂಡಿಸುವುದಾಗಿ ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಪ್ರಕಾಶ ಚಲವಾದಿ(ಸರೂರ) ಹೇಳಿದರು.

ತಾಪಂಗೆ ಸೇರಿದ ಆಸ್ತಿಯನ್ನು ನಿಯಮ ಬಾಹಿರವಾಗಿ ನೆಲಸಮ ಮಾಡಿದ್ದು ಅಲ್ಲದೇ ಅಲ್ಲಿದ್ದ ಲಕ್ಷಾಂತರ ರೂಪಾಯಿ ಕಲ್ಲು, ಮಣ್ಣು, ಕಟ್ಟಿಗೆ, ಕಬ್ಬಿಣವನ್ನು ಹರಾಜು ಹಾಕದೆ ಸರ್ಕಾರಕ್ಕೆ ನಷ್ಟವನ್ನುಂಟು ಮಾಡಿರುವುದೇತಕ್ಕೆ ಎಂದು ತಾಪಂ ಅಧಿಕಾರಿಯನ್ನು ಪ್ರಶ್ನಿಸಿ ಹೋರಾಟ ಹಮ್ಮಿಕೊಂಡಿದ್ದೇವು. ಇದಕ್ಕೆ ತಾಪಂ ಅಧಿಕಾರಿ ಪುರಸಭೆ ಮುಖ್ಯಾಧಿಕಾರಿಗೆ ಸ್ಪಷ್ಟೀಕರಣ ಕೋರಿ ನೋಟಿಸ್ ನೀಡಿದ್ದರು. ಮುಖ್ಯಾಧಿಕಾರಿಗಳು ಉತ್ತರಿಸುತ್ತಿದ್ದರು. ಅದು ಬಿಟ್ಟು ಪುರಸಭೆ ಅಧ್ಯಕ್ಷದಂತಹ ಜವಾಬ್ದಾರಿಯುತ ಹುದ್ದೆಯಲ್ಲಿರುವ ಗೊಳಸಂಗಿ ಅವರು, ದಲಿತ ಸಮಾಜದ ಹೋರಾಟಗಾರರೊಬ್ಬರ ಬಗ್ಗೆ ಆಧಾರ ರಹಿತ ಆರೋಪ ಮಾಡುತ್ತಿರುವುದು ಸರಿಯಲ್ಲ. ಪುರಸಭೆ ಅಧ್ಯಕ್ಷರ ಹೇಳಿಕೆ ಖಂಡಿಸಿ ಪುರಸಭೆ ಎದುರಿಗೆ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೇಳಿದರು.

ದಲಿತ ಸಂಘರ್ಷ ಸಮೀತಿ ಜಿಲ್ಲಾ ಸಂಚಾಲಕ ಹರೀಶ ನಾಟೀಕಾರ ಮಾತನಾಡಿ, ‘ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ನೀನು ಆರಾಧಿಸುವ ಖುರಾನ್ ಗ್ರಂಥವನ್ನು ಪ್ರಮಾಣ ಮಾಡಿ ನಿಜವಾದ ಮುಸ್ಲಿಂನಾಗಿದ್ದರೆ ಆರೋಪ ಮಾಡಿದಂತೆ ನಾನು ಐದು ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದೇನೆ ಎಂದು ಹೇಳುವ ಕುರಿತಾದ ಒಂದೇ ಒಂದು ದಾಖಲೆಯನ್ನು ಜನರ ಮುಂದೆ ಬಿಡುಗಡೆ ಮಾಡಿದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ. ನನ್ನ 35 ವರ್ಷದ ಹೋರಾಟದ ಬದುಕಿನಲ್ಲಿ ನನ್ನ ಸ್ವಂತ ಹಣ ಖರ್ಚು ಮಾಡಿ ಶೋಷಿತರ ಪರವಾಗಿ ಹೋರಾಟ ನಡೆಸುತ್ತ ಬಂದಿದ್ದೇನೆ. ಯಾವುದೇ ಇಲಾಖೆ, ಅಧಿಕಾರಿ ಬಳಿಯೂ ಕೈಚಾಚಿಲ್ಲ. ಪುರಸಭೆಯಲ್ಲಿ ಎಸ್ಸಿ, ಎಸ್ಟಿ ಜನಾಂಗದ ಕಾರ್ಮಿಕರ ಕುರಿತು ಹಗುರವಾಗಿ ಮಾತನಾಡುತ್ತಿದ್ದು ನಿಮ್ಮ ಮೇಲೆ ಜಾತಿ ನಿಂದನೆ ದೂರು ದಾಖಲಿಸುತ್ತೇನೆ ಎಂದು ಹೇಳಿದರು.

ಪುರಸಭೆಯ ಜೆಸಿಬಿಗಳೇ ತಾಪಂ ವಸತಿ ಗೃಹಗಳಿರುವ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿರುವ ಫೋಟೋ, ವಿಡಿಯೋ ದಾಖಲೆಗಳು ನಮ್ಮ ಬಳಿ ಇವೆ. ಪುರಸಭೆ ಅಧ್ಯಕ್ಷ ಒಬ್ಬ ಗೂಂಡಾ ಆಗಿದ್ದು ಆತನ ಮೇಲೆ ರೌಡಿಶೀಟರ್ ಕೇಸ್ ದಾಖಲಾಗಿದೆ. ಅಧ್ಯಕ್ಷನಾಗಿದ್ದುಕೊಂಡು ಜಾತಿವಾದಿಯಾಗಿದ್ದೀರಿ. ದಲಿತರ ಗುಡಿಸಲು, ಮನೆ, ಶೆಡ್‌ಗಳನ್ನು ನೆಲಸಮ ಮಾಡಿ ನಿಮ್ಮ ಜನಾಂಗದವರ ಮನೆ, ಅಂಗಡಿಗಳನ್ನು ತೆರವುಗೊಳಿಸದೇ ಹಾಗೆ ಬಿಟ್ಟು ಪಕ್ಷಪಾತ ಧೋರಣೆ ಅನುಸರಿಸಿದ್ದೀರಿ. ನೀವು ಅಧ್ಯಕ್ಷರಾಗಲು ನಾಲಾಯಕ್ ಎಂದು ಆಕ್ರೋಶ ಹೊರ ಹಾಕಿದರು.

ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ನೀವೇ ಆಯ್ಕೆಯಾದಾಗ ದಲಿತರು-ಮುಸ್ಲಿಂರು ಅಣ್ಣತಮ್ಮಂದಿರು ಎನ್ನುವ ಭಾವನೆಯಿಂದ ನಾವು ಬಂದು ನಿಮಗೆ ಅಭಿನಂದಿಸಿದ್ದೇವು. ದಿ.ರಸೂಲ ದೇಸಾಯಿ, ದಿ.ಅಲ್ಲಾಭಕ್ಷ್ಯ ಢವಳಗಿ ಅಂತಹ ಮುಸ್ಲಿಂ ನಾಯಕರು ದಲಿತರೊಂದಿಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದರು. ಆದರೆ, ನೀವು ದಲಿತರೆಂದರೆ ವೈಷಮ್ಯ ಸಾಧಿಸುತ್ತಿದ್ದೀರಿ ಎಂದು ಹರಿಹಾಯ್ದರು.

ಸುದ್ದಿಗೋಷ್ಠಿಯಲ್ಲಿ ದಲಿತಪರ ಸಂಘಟನೆಯ ಪ್ರಶಾಂತ ಕಾಳೆ, ಬಸವರಾಜ ಸರೂರ, ಆನಂದ ಮುದೂರ, ಹಣಮಂತ ಗುಂಡಕರ್ಜಗಿ, ಬಸವರಾಜ ಚಲವಾದಿ, ಪ್ರಕಾಶ ಗುಂಡಕರ್ಜಗಿ ಇದ್ದರು.

ಕ್ಷೇತ್ರದ ಶಾಸಕರು ದಲಿತರು-ಮುಸ್ಲಿಂರ ಒಳ್ಳೆಯ ಸಂಬಂಧವನ್ನು ಹಾಳು ಮಾಡುತ್ತಿರುವ ಮಹೆಬೂಬ ಗೊಳಸಂಗಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ದಲಿತಪರ ಸಂಘಟನೆಯ ಮುಖಂಡರ ಬಗ್ಗೆ ಆಧಾರ ರಹಿತ ಆರೋಪ ಮಾಡಿರುವ ಪುರಸಭೆ ಅಧ್ಯಕ್ಷರ ವಿರುದ್ದ ಪುರಸಭೆ ಎದುರಿಗೆ ಜು.21 ರಂದು ಧರಣಿ ಸತ್ಯಾಗ್ರಹ ಆರಂಭಿಸುತ್ತೇವೆ.
–ಹರೀಶ ನಾಟೀಕಾರ, ದಸಂಸ ಜಿಲ್ಲಾ ಸಂಚಾಲಕ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ