Demand for money-disclose document to allegation-challenge of Dalit leaders

ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಹಣಕ್ಕೆ ಬೇಡಿಕೆ-ಆರೋಪಕ್ಕೆ ದಾಖಲೆ ಬಹಿರಂಗಪಡಿಸಿ-ದಲಿತ ಮುಖಂಡರ ಸವಾಲು

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾನೊಬ್ಬ ನಿಜವಾದ ಮುಸ್ಲಿಂನಾಗಿದ್ದರೆ ಖುರಾನ್ ಗ್ರಂಥದ ಮೇಲೆ ಪ್ರಮಾಣ ಮಾಡಿ ದಲಿತ ಮುಖಂಡರ ಮೇಲೆ ಮಾಡಿದ ಹಣಕ್ಕೆ ಬೇಡಿಕೆ ಇರಿಸಿದ ಆರೋಪಕ್ಕೆ ಮೊದಲು ಜನರ ಎದುರಿಗೆ ದಾಖಲೆಗಳನ್ನು ಬಹಿರಂಗಪಡಿಸಿ ಮಾತನಾಡುವುದನ್ನು ಕಲಿತುಕೊಳ್ಳಲಿ ಎಂದು ದಲಿತ ಸಮಾಜದ ಮುಖಂಡರು ಸವಾಲು ಹಾಕಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯದ ಕುರಿತು ಮಾತನಾಡಿದರು.

ಪಟ್ಟಣದ ತಾಪಂ ವಸತಿ ಗೃಹಗಳು, ಸಾಮರ್ಥ್ಯ ಸೌಧ ನೆಲಸಮ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ದಲಿತ ಮುಖಂಡರ ಮೇಲೆ ಮಾಡಿದ ಆರೋಪವನ್ನು ಖಂಡಿಸುವುದಾಗಿ ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಪ್ರಕಾಶ ಚಲವಾದಿ(ಸರೂರ) ಹೇಳಿದರು.

ತಾಪಂಗೆ ಸೇರಿದ ಆಸ್ತಿಯನ್ನು ನಿಯಮ ಬಾಹಿರವಾಗಿ ನೆಲಸಮ ಮಾಡಿದ್ದು ಅಲ್ಲದೇ ಅಲ್ಲಿದ್ದ ಲಕ್ಷಾಂತರ ರೂಪಾಯಿ ಕಲ್ಲು, ಮಣ್ಣು, ಕಟ್ಟಿಗೆ, ಕಬ್ಬಿಣವನ್ನು ಹರಾಜು ಹಾಕದೆ ಸರ್ಕಾರಕ್ಕೆ ನಷ್ಟವನ್ನುಂಟು ಮಾಡಿರುವುದೇತಕ್ಕೆ ಎಂದು ತಾಪಂ ಅಧಿಕಾರಿಯನ್ನು ಪ್ರಶ್ನಿಸಿ ಹೋರಾಟ ಹಮ್ಮಿಕೊಂಡಿದ್ದೇವು. ಇದಕ್ಕೆ ತಾಪಂ ಅಧಿಕಾರಿ ಪುರಸಭೆ ಮುಖ್ಯಾಧಿಕಾರಿಗೆ ಸ್ಪಷ್ಟೀಕರಣ ಕೋರಿ ನೋಟಿಸ್ ನೀಡಿದ್ದರು. ಮುಖ್ಯಾಧಿಕಾರಿಗಳು ಉತ್ತರಿಸುತ್ತಿದ್ದರು. ಅದು ಬಿಟ್ಟು ಪುರಸಭೆ ಅಧ್ಯಕ್ಷದಂತಹ ಜವಾಬ್ದಾರಿಯುತ ಹುದ್ದೆಯಲ್ಲಿರುವ ಗೊಳಸಂಗಿ ಅವರು, ದಲಿತ ಸಮಾಜದ ಹೋರಾಟಗಾರರೊಬ್ಬರ ಬಗ್ಗೆ ಆಧಾರ ರಹಿತ ಆರೋಪ ಮಾಡುತ್ತಿರುವುದು ಸರಿಯಲ್ಲ. ಪುರಸಭೆ ಅಧ್ಯಕ್ಷರ ಹೇಳಿಕೆ ಖಂಡಿಸಿ ಪುರಸಭೆ ಎದುರಿಗೆ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೇಳಿದರು.

ದಲಿತ ಸಂಘರ್ಷ ಸಮೀತಿ ಜಿಲ್ಲಾ ಸಂಚಾಲಕ ಹರೀಶ ನಾಟೀಕಾರ ಮಾತನಾಡಿ, ‘ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ನೀನು ಆರಾಧಿಸುವ ಖುರಾನ್ ಗ್ರಂಥವನ್ನು ಪ್ರಮಾಣ ಮಾಡಿ ನಿಜವಾದ ಮುಸ್ಲಿಂನಾಗಿದ್ದರೆ ಆರೋಪ ಮಾಡಿದಂತೆ ನಾನು ಐದು ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದೇನೆ ಎಂದು ಹೇಳುವ ಕುರಿತಾದ ಒಂದೇ ಒಂದು ದಾಖಲೆಯನ್ನು ಜನರ ಮುಂದೆ ಬಿಡುಗಡೆ ಮಾಡಿದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ. ನನ್ನ 35 ವರ್ಷದ ಹೋರಾಟದ ಬದುಕಿನಲ್ಲಿ ನನ್ನ ಸ್ವಂತ ಹಣ ಖರ್ಚು ಮಾಡಿ ಶೋಷಿತರ ಪರವಾಗಿ ಹೋರಾಟ ನಡೆಸುತ್ತ ಬಂದಿದ್ದೇನೆ. ಯಾವುದೇ ಇಲಾಖೆ, ಅಧಿಕಾರಿ ಬಳಿಯೂ ಕೈಚಾಚಿಲ್ಲ. ಪುರಸಭೆಯಲ್ಲಿ ಎಸ್ಸಿ, ಎಸ್ಟಿ ಜನಾಂಗದ ಕಾರ್ಮಿಕರ ಕುರಿತು ಹಗುರವಾಗಿ ಮಾತನಾಡುತ್ತಿದ್ದು ನಿಮ್ಮ ಮೇಲೆ ಜಾತಿ ನಿಂದನೆ ದೂರು ದಾಖಲಿಸುತ್ತೇನೆ ಎಂದು ಹೇಳಿದರು.

ಪುರಸಭೆಯ ಜೆಸಿಬಿಗಳೇ ತಾಪಂ ವಸತಿ ಗೃಹಗಳಿರುವ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿರುವ ಫೋಟೋ, ವಿಡಿಯೋ ದಾಖಲೆಗಳು ನಮ್ಮ ಬಳಿ ಇವೆ. ಪುರಸಭೆ ಅಧ್ಯಕ್ಷ ಒಬ್ಬ ಗೂಂಡಾ ಆಗಿದ್ದು ಆತನ ಮೇಲೆ ರೌಡಿಶೀಟರ್ ಕೇಸ್ ದಾಖಲಾಗಿದೆ. ಅಧ್ಯಕ್ಷನಾಗಿದ್ದುಕೊಂಡು ಜಾತಿವಾದಿಯಾಗಿದ್ದೀರಿ. ದಲಿತರ ಗುಡಿಸಲು, ಮನೆ, ಶೆಡ್‌ಗಳನ್ನು ನೆಲಸಮ ಮಾಡಿ ನಿಮ್ಮ ಜನಾಂಗದವರ ಮನೆ, ಅಂಗಡಿಗಳನ್ನು ತೆರವುಗೊಳಿಸದೇ ಹಾಗೆ ಬಿಟ್ಟು ಪಕ್ಷಪಾತ ಧೋರಣೆ ಅನುಸರಿಸಿದ್ದೀರಿ. ನೀವು ಅಧ್ಯಕ್ಷರಾಗಲು ನಾಲಾಯಕ್ ಎಂದು ಆಕ್ರೋಶ ಹೊರ ಹಾಕಿದರು.

ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ನೀವೇ ಆಯ್ಕೆಯಾದಾಗ ದಲಿತರು-ಮುಸ್ಲಿಂರು ಅಣ್ಣತಮ್ಮಂದಿರು ಎನ್ನುವ ಭಾವನೆಯಿಂದ ನಾವು ಬಂದು ನಿಮಗೆ ಅಭಿನಂದಿಸಿದ್ದೇವು. ದಿ.ರಸೂಲ ದೇಸಾಯಿ, ದಿ.ಅಲ್ಲಾಭಕ್ಷ್ಯ ಢವಳಗಿ ಅಂತಹ ಮುಸ್ಲಿಂ ನಾಯಕರು ದಲಿತರೊಂದಿಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದರು. ಆದರೆ, ನೀವು ದಲಿತರೆಂದರೆ ವೈಷಮ್ಯ ಸಾಧಿಸುತ್ತಿದ್ದೀರಿ ಎಂದು ಹರಿಹಾಯ್ದರು.

ಸುದ್ದಿಗೋಷ್ಠಿಯಲ್ಲಿ ದಲಿತಪರ ಸಂಘಟನೆಯ ಪ್ರಶಾಂತ ಕಾಳೆ, ಬಸವರಾಜ ಸರೂರ, ಆನಂದ ಮುದೂರ, ಹಣಮಂತ ಗುಂಡಕರ್ಜಗಿ, ಬಸವರಾಜ ಚಲವಾದಿ, ಪ್ರಕಾಶ ಗುಂಡಕರ್ಜಗಿ ಇದ್ದರು.

ಕ್ಷೇತ್ರದ ಶಾಸಕರು ದಲಿತರು-ಮುಸ್ಲಿಂರ ಒಳ್ಳೆಯ ಸಂಬಂಧವನ್ನು ಹಾಳು ಮಾಡುತ್ತಿರುವ ಮಹೆಬೂಬ ಗೊಳಸಂಗಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ದಲಿತಪರ ಸಂಘಟನೆಯ ಮುಖಂಡರ ಬಗ್ಗೆ ಆಧಾರ ರಹಿತ ಆರೋಪ ಮಾಡಿರುವ ಪುರಸಭೆ ಅಧ್ಯಕ್ಷರ ವಿರುದ್ದ ಪುರಸಭೆ ಎದುರಿಗೆ ಜು.21 ರಂದು ಧರಣಿ ಸತ್ಯಾಗ್ರಹ ಆರಂಭಿಸುತ್ತೇವೆ.
–ಹರೀಶ ನಾಟೀಕಾರ, ದಸಂಸ ಜಿಲ್ಲಾ ಸಂಚಾಲಕ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ