ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

Ad
Ad

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

Ad
Ad

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500