ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ