ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ