ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ