ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

Chicken Road od InOut

Slávte slovenskí hráči! V tejto recenzii sa vám priblížime k jednému

Chicken Road par InOut

La nouvelle production de InOut, un studio émergent dans le monde

La Lotería de Pólvora con el Gallo de MyStake

Presentación y Temática MyStake Chicken es un juego de ruleta estilo

Chicken Road von InOut: Eine Abenteuerreise durch die Automatenglücksspiele

Das Slot-Spiel "Chicken Road" ist das Ergebnis der kreativen Arbeit des

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ವಿಜಯಪುರ : ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಭೂಮಿಕಾ ಜ್ಯುವೆಲ್ಲರಿ ಶಾಪ್‌ಗೆ ಇಬ್ಬರು ಅಪರಿಚಿತ ಮುಸುಕುಧಾರಿಗಳು ನುಗ್ಗಿ ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಹಾಡಹಗಲೇ ನಡೆದಿದ್ದು ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಲಸಂಗಿಯ ಮಹಾರುದ್ರ ಕಂಚಗಾರ ಎಂಬುವರಿಗೆ ಸೇರಿದ ಬಂಗಾರದ ಅಂಗಡಿ ಮೇಲೆ ಮುಸುಕುಧಾರಿ ವ್ಯಕ್ತಿಗಳು ಇಬ್ಬರೂ ಬೈಕ್ ಮೇಲೆ ಬಂದು ಅಂಗಡಿಯಲ್ಲಿದ್ದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ದೋಚಿ ಪರಾರಿಯಾಗಿದ್ದಾರೆ. ಘಟನೆ

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ;                      ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ ಕೃತಕವಾಗಿ ಚಿತ್ರಿಸಿದ್ದು ಆ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿಲ್ಲ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಸ್ಪಷ್ಟಪಡಿಸಿದ್ದಾರೆ. ಚಿರತೆ ಕಾಣಿಸಿಕೊಂಡಿದ ಎಂದು ಗ್ರಾಮದ ಯುವಕ ಶಿವು ಕನ್ನೊಳ್ಳಿ ಎಂಬುವರು ತಮ್ಮ ಸ್ನೇಹಿತರ ಮೂಲಕ ಮಾಹಿತಿ ಪಡೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡಿದ್ದ ಫೋಟೋ ಅಸಲಿ ಅಲ್ಲ.ಸದರಿ ಸ್ಥಳಕ್ಕೆ ನಮ್ಮ ಇಲಾಖೆಯ ಗಸ್ತು ಪಾಲಕ ವಿಠಲ