ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ