ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.