ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು