Demanding money from the fighter: Municipal chairman Golasangi accused

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಪ್ರತಿಕ್ರಿಯೆ ನೀಡಿದ್ದು, ದಲಿತಪರ ಸಂಘಟನೆಯ ಹೆಸರಿನಲ್ಲಿ ಹರೀಶ ನಾಟೀಕಾರ ಎಂಬ ಹೋರಾಟಗಾರರ ಹಣ ವಸೂಲಿ ಮಾಡುವ ಸಮೀತಿ ಎಂದು ಹೆಸರು ಇಟ್ಟುಕೊಳ್ಳುವುದು ಒಳಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಪಂ ವಸತಿ ಗೃಹಗಳನ್ನು ನೆಲಸಮಗೊಳಿಸಿದ್ದು ಪುರಸಭೆಯವರಲ್ಲ. ಪುರಸಭೆಗೂ ಇದಕ್ಕೂ ಸಂಬಂಧವಿಲ್ಲ. ಗ್ರಾಮದೇವತೆ ಜಾತ್ರಾ ಕಮೀಟಿಯ ಅಧ್ಯಕ್ಷನೆಂದು ಊರಿನ ದೈವದವರು ಸಮೀತಿಯ ಮುಂದಾಳತ್ವ ವಹಿಸಿರುತ್ತಾರೆ. ಆದರೆ ಪುರಸಭೆ ಅಧ್ಯಕ್ಷರಿಗೆ ಯಾವುದೇ ಹಣಕಾಸಿನ ವ್ಯವಹಾರ, ಆರ್ಥಿಕ ಚಟುವಟಿಕೆ ಕೈಗೊಳ್ಳುವ ಜವಾಬ್ದಾರಿಯನ್ನು ಜಾತ್ರಾ ಕಮೀಟಿಯವರು ಕೊಟ್ಟಿರುವುದಿಲ್ಲ. ವಿಷಯ ಹೀಗಿದ್ದಾಗ್ಯೂ ನನಗೆ ಜಾತ್ರಾ ಕಮಿಟಿಯವರಿಂದ ಐದು ಲಕ್ಷ ರೂ.ಹಣ ಕೊಡಬೇಕು ಎಂದು ನಾಟೀಕಾರ ಬೇಡಿಕೆ ಇರಿಸಿದರು. ನಾನು ಭ್ರಷ್ಟಾಚಾರಿಯಲ್ಲ. ಜಾತ್ರೆಯ ಸಮಯದಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡಿದ್ದೇನೆ.

ಆದರೆ, ಹರೀಶ ನಾಟೀಕಾರ ದಲಿತ ಸಂಘರ್ಷ ಸಮಿತಿಯ ಹೆಸರಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ. ದಲಿತ ಸಂಘರ್ಷ ಸಮಿತಿ ಎಂದು ಹೆಸರಿಸುವ ಬದಲು ಹಣ ವಸೂಲಿ ಮಾಡುವ ಸಮೀತಿ ಎಂದು ಹೆಸರಿಟ್ಟುಕೊಳ್ಳಬೇಕು ಎಂದು ಹರಿಹಾಯ್ದರು. ತಾಪಂನಿಂದ ಕೊಟ್ಟಿರುವ ನೋಟಿಸಿಗೆ ಮುಖ್ಯಾಧಿಕಾರಿ ಉತ್ತರ ಕೊಡುತ್ತಾರೆ ಎಂದು ತಿಳಿಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು