Devaraju Arasu: Pious Arasu who gave land to the poor - Tehsildar Ningappa

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.

8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO

ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.

ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.

ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.

ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ