ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.
Join Our Telegram: https://t.me/dcgkannada
ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.
8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.
ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO
ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.
ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.
ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.
ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.