Develop an action plan for effective project implementation progress: Minister Lad

ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಧಾರವಾಡ, ಜುಲೈ.21: ಈ ವರ್ಷದ ಮೊದಲನೇ ಕೆಡಿಪಿ ಸಭೆಯಲ್ಲಿ ಇಲಾಖೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಾಧನೆ ಆಗಿರುವುದು ತೃಪ್ತಿ ತಂದಿದೆ. ಇಲಾಖಾವಾರು ಅನುದಾನ ಬಿಡುಗಡೆ, ಬಳಕೆ ಮತ್ತು ಭೌತಿಕ ಗುರಿ ಸಾಧನೆಯನ್ನು ಪರಿಶೀಲಿಸಿ, ಯೋಜನಾ ಅನುಷ್ಠಾನ ಪ್ರಗತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಕ್ರಿಯಾಯೋಜನೆಯನ್ನು ಈಗಿನಿಂದಲೇ ಸಿದ್ದಪಡಿಸಿಕೊಳ್ಳಿ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್.ಲಾಡ್ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 2025-26 ನೇ ಸಾಲಿನ ಜುಲೈ 2025 ರ ಅಂತ್ಯಕ್ಕೆ ಸಂಬಂಧಿಸಿದಂತೆ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಜಿಲ್ಲಾ ಪಂಚಾಯತ ವಲಯದಲ್ಲಿ ನಿಗದಿತ ಗುರಿಗೆ ಶೇ. 77.30 ರಷ್ಟು ಭೌತಿಕ ಮತ್ತು ಶೇ. 35.47 ರಷ್ಟು ಆರ್ಥಿಕ ಪ್ರಗತಿ ಆಗಿದೆ. ರಾಜ್ಯ ವಲಯದಲ್ಲಿ ನಿಗದಿತ ಗುರಿಗೆ ಶೇ. 96.41 ರಷ್ಟು ಭೌತಿಕ ಹಾಗೂ ಶೇ. 88.09 ರಷ್ಟು ಆರ್ಥಿಕ ಪ್ರಗತಿ ಆಗಿದೆ. ಅದೇ ರೀತಿ ಕೇಂದ್ರ ಪ್ರಾಯೋಜಕತ್ವದ ಯೋಜನೆಗಳ ನಿಗದಿತ ಗುರಿಗೆ ಶೇ. 92.39 ರಷ್ಟು ಭೌತಿಕ ಹಾಗೂ ಶೇ. 94.16 ರಷ್ಟು ಆರ್ಥಿಕ ಪ್ರಗತಿ ಆಗಿದೆ. ಒಟ್ಟಾರೆ ಶೇ. 91.84 ರಷ್ಟು ಭೌತಿಕ ಹಾಗೂ ಶೇ. 86.21 ರಷ್ಟು ಆರ್ಥಿಕ ಪ್ರಗತಿಯಾಗಿದೆ ಎಂದು ವಿವರಿಸಿದರು.

ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ, ಸರ್ಕಾರದ ಯೋಜನೆಗಳನ್ನು ರೈತರಿಗೆ ಅನುಕೂಲವಾಗುವಂತೆ ಅನುಷ್ಠಾನಗೊಳಿಸಬೇಕು. ರೈತರ ಕೃಷಿ ಸಮಸ್ಯೆಗಳನ್ನು, ಉತ್ತಮ ತಳಿಯ ಬೀಜಗಳನ್ನು ಬಳಸಿಕೊಳ್ಳಲು ಅನುವಾಗುವಂತೆ ಕೃಷಿ ವಿಶ್ವವಿದ್ಯಾಲಯದ ಸಹಕಾರದೊಂದಿಗೆ ಅಲ್ಲಿನ ಕೃಷಿ ತಜ್ಞರ, ವಿಜ್ಞಾನಿಗಳ ಅನುಭವವನ್ನು ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕೃಷಿ ಇಲಾಖೆಯಿಂದ ರೈತರಿಗೆ ಆಧುನಿಕ ತಂತ್ರಜ್ಞಾನಗಳನ್ನು ಮತ್ತು ಕೃಷಿ ಉಪಕರಣಗಳನ್ನು ಬಳಸಲು ಪ್ರೋತ್ಸಾಹಿಸಲಾಗುತ್ತಿದೆ. ಬೂಮ್ ಸ್ಪಿಂಕ್ಲರ್‌ ಅನ್ನು ಪ್ರಾಯೋಗಿಕವಾಗಿ ಪರೀಕ್ಷೆ ಮಾಡಿದ್ದಾರೆ. ಅದು ಕಡಿಮೆ ಸಮಯದಲ್ಲಿ ಅತಿ ಬೇಗನೆ ಸ್ಪ್ಲಿಂಕಿಂಗ್ ಕೆಲಸ ಮಾಡುತ್ತದೆ. ಹಾಗೂ ಡ್ರೋನ್ ಮುಖಾಂತರ ಸ್ಪ್ರೇ ಮಾಡಬಹುದು. ಈ ಮಷಿನ್ 15 ನಿಮಿಷದಲ್ಲಿ ಒಂದು ಎಕ್ಕರೆ ಸ್ಪ್ರೇ ಮಾಡುತ್ತದೆ. ಆದ್ದರಿಂದ ಇವುಗಳನ್ನು ವಿಡಿಯೋ ಚಿತ್ರೀಕರಣ ಮಾಡಿ, ಎಲ್ಲ ಗ್ರಾಮಗಳ ಜನರಿಗೆ ತಿಳುವಳಿಕೆ ಮತ್ತು ಮಾಹಿತಿ ನೀಡಲು ಕೃಷಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನರೇಗಾ ಯೋಜನೆ ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಕೃಷಿ, ಪಂಚಾಯತ ರಾಜ್, ತೋಟಗಾರಿಕೆ, ಅರಣ್ಯ ಮತ್ತು ರೇಷ್ಮೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಎಲ್ಲರೂ ಸಮನ್ವಯದಿಂದ ಕ್ರಿಯಾಯೋಜನೆ ರೂಪಿಸಿ, ಜನರಿಗೆ ಉದ್ಯೋಗವಕಾಶಗಳನ್ನು ಹೆಚ್ಚಿಸಬೇಕು. ಹಾಗೂ ನರೇಗಾದಲ್ಲಿ ನೋಂದಣಿ ಆಗಿರುವ ಜನರು ಕೆಲಸಕ್ಕೆ ಬಾರದೇ ಇದ್ದರೆ, ಅಂತಹವರು ನರೇಗಾ ಕೆಲಸದಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು. ನರೇಗಾ ಯೋಜನೆಯ ಕಾಮಗಾರಿಗಳ ನಿಗದಿತ ಭೌತಿಕ ಗುರಿಯನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಸಾಧಸಬೇಕೆಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಕಲಘಟಗಿ, ಧಾರವಾಡ, ಹುಬ್ಬಳ್ಳಿ ಭಾಗದ ರೈತರು ಪರ್ಯಾಯ ಬೆಳೆಯಾಗಿ ಅಡಿಕೆ ತೋಟ ಹಾಗೂ ರೇಷ್ಮೆ ಸಾಕಾಣಿಕೆ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿಗೆ ರೇಷ್ಮೆ ಬೆಳೆ ಹಾಗೂ ರೇಷ್ಮೆ ಹುಳು ಸಾಕಾಣಿಕೆ ಕೃಷಿಯನ್ನು ವಿಸ್ತರಣೆ ಮಾಡಲು ಗ್ರಾಮವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಇಲಾಖೆಯ ಅಧಿಕಾರಿಗಳಗೆ ಸಚಿವರು ನಿರ್ದೇಶಿಸಿದರು

ಅತಿಯಾದ ಮಳೆಯಿಂದಾಗಿ ಗ್ರಾಮಗಳ ಮುಖ್ಯ ರಸ್ತೆಗಳು ಹಾಗೂ ಸಂಪರ್ಕ ಸೇತುವೆ, ರಸ್ತೆಗಳು ಹಾಳಾಗಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ತಕ್ಷಣ ಅವುಗಳನ್ನು ದುರಸ್ತಿ ಮಾಡಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ, ಶೂನ್ಯ ಫಲಿತಾಂಶ ಮತ್ತು ಶೂನ್ಯ ವಿದ್ಯಾರ್ಥಿ ದಾಖಲಾತಿ ಹೊಂದಿರುವ ಶಾಲೆಗಳಿಗೆ ನೋಟಿಸ್ ನೀಡಿ, ನಿಯಮಾನುಸಾರ ಬಂದ್ ಮಾಡಬೇಕು. ಅಲ್ಲಿನ ಸಿಬ್ಬಂದಿಗಳನ್ನು ಸಿಬ್ಬಂದಿ ಅಗತ್ಯವಿರುವ ಸರ್ಕಾರಿ ಶಾಲೆಗಳಿಗೆ ತಕ್ಷಣ ವರ್ಗಾಯಿಸಬೇಕು. ಇದರಿಂದ ಸರ್ಕಾರದ ಅನುದಾನದ ಅಪವ್ಯಯ ತಪ್ಪುತ್ತದೆ. ಕಳೆದ ಎರಡು ವರ್ಷಗಳಿಂದ ಈ ಕುರಿತು ಗಂಭೀರ ಕ್ರಮ ವಹಿಸಿದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಧೋರಣೆ ವಿರುದ್ಧ ಕೋಪಗೊಂಡ ಸಚಿವರು ತಕ್ಷಣ ಕ್ರಮವಹಿಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.

ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ