Development of vachana literature is due to Halakatti

ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಮುದ್ದೇಬಿಹಾಳ : ಶರಣರು ವಚನಗಳನ್ನು ಬರೆದರೆ ಅವುಗಳನ್ನು ಸಂಗ್ರಹಿಸಿ ಸಮಾಜಕ್ಕೆ ಪಸರಿಸಿದ ಫ. ಗು. ಹಳಕಟ್ಟಿ ವಚನ ಸಾಹಿತ್ಯವನ್ನು ಬೆಳೆಸಿದ್ದಾರೆ ಎಂದು ಚಿಂತಕಿ ಸೀಮಾ ದಂಡಾವತಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಸುರೇಶ ಬಾದರಬಂಡಿ ಅವರ ಮನೆಯಲ್ಲಿ ಗುರುವಾರ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ,ಬಸವ ಮಹಾಮನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶರಣ ಬೆಳಗು ಅನುಭಾವ ಮಾಲೆ -40 ಸಂಚಿಕೆಯ ಹುಣ್ಣಿಮೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕ ರುದ್ರೇಶ ಕಿತ್ತೂರ ಮಾತನಾಡಿ, ಡಾ.ಫ.ಗು.ಹಳಕಟ್ಟಿ ಅವರು ವಚನ ಗುಮ್ಮಟ ಎಂದು ಖ್ಯಾತರಾದವರು. ಅವರಿಂದಲೇ ವಚನ ಸಾಹಿತ್ಯ ಉಳಿಯಿತು. ಬೆಳೆದು ಹರಡಲು ಸಾಧ್ಯವಾಯಿತು. ವಚನಶಾಸ್ತ್ರ ಸಾರ 3 ಸಂಪುಟಗಳು, ಹರಿಹರನ ರಗಳೆ, ಶೂನ್ಯ ಸಂಪಾದನೆ ಶಿವಶರಣ ಚರಿತ್ರೆ, ಅಮರ ಗಣಾಧಿಶ್ವರರ ಚರಿತ್ರೆ ಅತ್ಯಂತ ಮಹತ್ವದ ಕೃತಿಗಳಾಗಿವೆ ಎಂದು ಹೇಳಿದರು.

ಶಿಕ್ಷಕಿ ರಾಜೇಶ್ವರಿ ಕಡಿ ಮಾತನಾಡಿ, ಹಡಪದ ಅಪ್ಪಣ್ಣನವರು ಬಸವಣ್ಣನವರ ಆಪ್ತ ಕಾರ್ಯದರ್ಶಿ. ತಾಂಬೂಲುವನ್ನು ಒದಗಿಸುವ ಅಚ್ಚುಮೆಚ್ಚಿನ ಶರಣಾಗಿದ್ದರು. ಭೌತಿಕದಲ್ಲಿ ಮಾತ್ರವಲ್ಲ ಪಾರಮಾರ್ಥಿಕ ವಿಷಯಗಳಲ್ಲಿಯೂ ಬಸವಣ್ಣನವರಿಗೆ ಸಹಾಯಕರಾಗಿದ್ದರು ಎಂದರು.

ಕದಳಿ ವೇದಿಕೆ ಅಧ್ಯಕ್ಷೆ ಕಾಶಿಬಾಯಿ ರಾಂಪೂರ , ನಿವೃತ್ತ ಮುಖ್ಯಶಿಕ್ಷಕಿ ಡಿ.ಬಿ.ಗುರಿಕಾರ, ಕುಷ್ಟಗಿಯ ರಮೇಶ ಸ್ವಾಮೀಜಿ, ಮಹಾದೇವಿ ನಾಲತವಾಡ ಮಾತನಾಡಿದರು. ಚೌಡಮ್ಮ ಶಿವಯೋಗಿಮಠ ಸ್ವಾಗತಿಸಿದರು. ಸರೋಜಾ ಕೋರಿ ನಿರೂಪಿಸಿದರು. ಕದಳಿ ವೇದಿಕೆ, ಶರಣ ಸಾಹಿತ್ಯ ಪರಿಷತ್, ಮನೆಯಲ್ಲಿಮಹಾಮನೆ ಬಳಗದ ಸದಸ್ಯರು ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ