Development of vachana literature is due to Halakatti

ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಮುದ್ದೇಬಿಹಾಳ : ಶರಣರು ವಚನಗಳನ್ನು ಬರೆದರೆ ಅವುಗಳನ್ನು ಸಂಗ್ರಹಿಸಿ ಸಮಾಜಕ್ಕೆ ಪಸರಿಸಿದ ಫ. ಗು. ಹಳಕಟ್ಟಿ ವಚನ ಸಾಹಿತ್ಯವನ್ನು ಬೆಳೆಸಿದ್ದಾರೆ ಎಂದು ಚಿಂತಕಿ ಸೀಮಾ ದಂಡಾವತಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಸುರೇಶ ಬಾದರಬಂಡಿ ಅವರ ಮನೆಯಲ್ಲಿ ಗುರುವಾರ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ,ಬಸವ ಮಹಾಮನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶರಣ ಬೆಳಗು ಅನುಭಾವ ಮಾಲೆ -40 ಸಂಚಿಕೆಯ ಹುಣ್ಣಿಮೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕ ರುದ್ರೇಶ ಕಿತ್ತೂರ ಮಾತನಾಡಿ, ಡಾ.ಫ.ಗು.ಹಳಕಟ್ಟಿ ಅವರು ವಚನ ಗುಮ್ಮಟ ಎಂದು ಖ್ಯಾತರಾದವರು. ಅವರಿಂದಲೇ ವಚನ ಸಾಹಿತ್ಯ ಉಳಿಯಿತು. ಬೆಳೆದು ಹರಡಲು ಸಾಧ್ಯವಾಯಿತು. ವಚನಶಾಸ್ತ್ರ ಸಾರ 3 ಸಂಪುಟಗಳು, ಹರಿಹರನ ರಗಳೆ, ಶೂನ್ಯ ಸಂಪಾದನೆ ಶಿವಶರಣ ಚರಿತ್ರೆ, ಅಮರ ಗಣಾಧಿಶ್ವರರ ಚರಿತ್ರೆ ಅತ್ಯಂತ ಮಹತ್ವದ ಕೃತಿಗಳಾಗಿವೆ ಎಂದು ಹೇಳಿದರು.

ಶಿಕ್ಷಕಿ ರಾಜೇಶ್ವರಿ ಕಡಿ ಮಾತನಾಡಿ, ಹಡಪದ ಅಪ್ಪಣ್ಣನವರು ಬಸವಣ್ಣನವರ ಆಪ್ತ ಕಾರ್ಯದರ್ಶಿ. ತಾಂಬೂಲುವನ್ನು ಒದಗಿಸುವ ಅಚ್ಚುಮೆಚ್ಚಿನ ಶರಣಾಗಿದ್ದರು. ಭೌತಿಕದಲ್ಲಿ ಮಾತ್ರವಲ್ಲ ಪಾರಮಾರ್ಥಿಕ ವಿಷಯಗಳಲ್ಲಿಯೂ ಬಸವಣ್ಣನವರಿಗೆ ಸಹಾಯಕರಾಗಿದ್ದರು ಎಂದರು.

ಕದಳಿ ವೇದಿಕೆ ಅಧ್ಯಕ್ಷೆ ಕಾಶಿಬಾಯಿ ರಾಂಪೂರ , ನಿವೃತ್ತ ಮುಖ್ಯಶಿಕ್ಷಕಿ ಡಿ.ಬಿ.ಗುರಿಕಾರ, ಕುಷ್ಟಗಿಯ ರಮೇಶ ಸ್ವಾಮೀಜಿ, ಮಹಾದೇವಿ ನಾಲತವಾಡ ಮಾತನಾಡಿದರು. ಚೌಡಮ್ಮ ಶಿವಯೋಗಿಮಠ ಸ್ವಾಗತಿಸಿದರು. ಸರೋಜಾ ಕೋರಿ ನಿರೂಪಿಸಿದರು. ಕದಳಿ ವೇದಿಕೆ, ಶರಣ ಸಾಹಿತ್ಯ ಪರಿಷತ್, ಮನೆಯಲ್ಲಿಮಹಾಮನೆ ಬಳಗದ ಸದಸ್ಯರು ಇದ್ದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ