Devotee's declaration to Lord Amareshwar Swamiji to lead the responsibility of the new Math

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ.

ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ ಅವರನ್ನು ಸನ್ಮಾನಿಸಿ ಮುದ್ದೇಬಿಹಾಳ ಭಕ್ತರ ಕೋರಿಕೆಯನ್ನು ಮುಂದಿಟ್ಟಿದ್ದಾರೆ.

ಈ ಕುರಿತು ದೂರವಾಣಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಕಳೆದ ಮೂರು ವರ್ಷದ ಹಿಂದೆ ಹುನಗುಂದಕ್ಕೆ ತೆರಳಿ ಅಮರೇಶ್ವರ ದೇವರನ್ನು ಭೇಟಿ ಮಾಡಿ ನಮ್ಮ ಭಕ್ತರ ಇಚ್ಛೆಯನ್ನು ತಿಳಿಸಿದ್ದೇವು. ಗಚ್ಚಿನಮಠಕ್ಕೆ ಈಗಾಗಲೇ ಪೀಠಾಧಿಕಾರಿಯಾಗಿರುವ ಅವರು ಮುದ್ದೇಬಿಹಾಳದ ಹೊಸಮಠವನ್ನು ಶಾಖಾ ಮಠವನ್ನಾಗಿ ಮಾಡಿಕೊಂಡು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಭಕ್ತರು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾಗಿ ಹೇಳಿದರು.

ಸ್ವಾಮೀಜಿಯವರನ್ನು ಮುದ್ದೇಬಿಹಾಳಕ್ಕೆ ಕರೆತರಲು ಮುದ್ದೇಬಿಹಾಳದ ಭಕ್ತರ ಅಭಿಪ್ರಾಯ ಸಂಗ್ರಹಿಸಲು ಆ.3 ರಂದು ಕಿಲ್ಲಾದ ಹೊಸಮಠದಲ್ಲಿ ಸಭೆ ಕರೆಯಲಾಗಿದ್ದು ಅಂದೇ ಅವರನ್ನು ಮುದ್ದೇಬಿಹಾಳದ ಮಠದ ಉಸ್ತುವಾರಿ, ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಲು ಚರ್ಚೆ ನಡೆಸಿ ಸಂಪೂರ್ಣ ಒಪ್ಪಿಗೆಯನ್ನು ಭಕ್ತರ ಮೂಲಕ ತಿಳಿಸಲಾಗುವುದು. ಇದಕ್ಕೆ ಸ್ವಾಮೀಜಿಯವರು ಅಂದಿನ ಸಭೆಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಕಲ್ಬುರ್ಗಿ ತಿಳಿಸಿದರು.

ಹೊಸಮಠ ಹಾಗೂ ಹುನಗುಂದದ ಗಚ್ಚಿನಮಠಕ್ಕೂ ಅವಿನಾಭಾವ ಸಂಬಂಧವಿದ್ದು ಅಮರೇಶ್ವರ ದೇವರು ಸ್ವಾಮೀಜಿಯವರ ಸಂಬಂಧಿಕರೇ ಹೊಸಮಠದ ಜವಾಬ್ದಾರಿ ಹಿಂದೆ ನಿಭಾಯಿಸುತ್ತಿದ್ದರು ಎಂದು ಕಲ್ಬುರ್ಗಿ ತಿಳಿಸಿದರು.

ನಿಯೋಗದಲ್ಲಿ ಮುಖಂಡರಾದ ಅಶೋಕ ನಾಡಗೌಡ, ಶಿವಾನಂದ ಹಿರೇಮಠ, ಕಾಮರಾಜ ಬಿರಾದಾರ, ಗೋಪಿ ಮಡಿವಾಳರ, ಬಸಲಿಂಗಪ್ಪ ರಕ್ಕಸಗಿ, ನಾಗಭೂಷಣ ನಾವದಗಿ, ಅಮರೇಶ ಗೂಳಿ, ರಾಜು ರಾಯಗೊಂಡ, ಪ್ರವೀಣ ನಾಗಠಾಣ, ಪುಟ್ಟು ರಾಯನಗೌಡ, ಸುಧೀರ ನಾವದಗಿ, ಮಹಾಂತೇಶ ಬೂದಿಹಾಳಮಠ, ಮುರುಗೇಶ ಮೋಟಗಿ, ಲೋಹಿತ ನಾಲತವಾಡ, ರವಿ ಅಮರಣ್ಣವರ, ಶರಣಯ್ಯ ಹಿರೇಮಠ ಮೊದಲಾದವರು ಇದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.