Devotee's declaration to Lord Amareshwar Swamiji to lead the responsibility of the new Math

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ.

ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ ಅವರನ್ನು ಸನ್ಮಾನಿಸಿ ಮುದ್ದೇಬಿಹಾಳ ಭಕ್ತರ ಕೋರಿಕೆಯನ್ನು ಮುಂದಿಟ್ಟಿದ್ದಾರೆ.

ಈ ಕುರಿತು ದೂರವಾಣಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಕಳೆದ ಮೂರು ವರ್ಷದ ಹಿಂದೆ ಹುನಗುಂದಕ್ಕೆ ತೆರಳಿ ಅಮರೇಶ್ವರ ದೇವರನ್ನು ಭೇಟಿ ಮಾಡಿ ನಮ್ಮ ಭಕ್ತರ ಇಚ್ಛೆಯನ್ನು ತಿಳಿಸಿದ್ದೇವು. ಗಚ್ಚಿನಮಠಕ್ಕೆ ಈಗಾಗಲೇ ಪೀಠಾಧಿಕಾರಿಯಾಗಿರುವ ಅವರು ಮುದ್ದೇಬಿಹಾಳದ ಹೊಸಮಠವನ್ನು ಶಾಖಾ ಮಠವನ್ನಾಗಿ ಮಾಡಿಕೊಂಡು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಭಕ್ತರು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾಗಿ ಹೇಳಿದರು.

ಸ್ವಾಮೀಜಿಯವರನ್ನು ಮುದ್ದೇಬಿಹಾಳಕ್ಕೆ ಕರೆತರಲು ಮುದ್ದೇಬಿಹಾಳದ ಭಕ್ತರ ಅಭಿಪ್ರಾಯ ಸಂಗ್ರಹಿಸಲು ಆ.3 ರಂದು ಕಿಲ್ಲಾದ ಹೊಸಮಠದಲ್ಲಿ ಸಭೆ ಕರೆಯಲಾಗಿದ್ದು ಅಂದೇ ಅವರನ್ನು ಮುದ್ದೇಬಿಹಾಳದ ಮಠದ ಉಸ್ತುವಾರಿ, ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಲು ಚರ್ಚೆ ನಡೆಸಿ ಸಂಪೂರ್ಣ ಒಪ್ಪಿಗೆಯನ್ನು ಭಕ್ತರ ಮೂಲಕ ತಿಳಿಸಲಾಗುವುದು. ಇದಕ್ಕೆ ಸ್ವಾಮೀಜಿಯವರು ಅಂದಿನ ಸಭೆಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಕಲ್ಬುರ್ಗಿ ತಿಳಿಸಿದರು.

ಹೊಸಮಠ ಹಾಗೂ ಹುನಗುಂದದ ಗಚ್ಚಿನಮಠಕ್ಕೂ ಅವಿನಾಭಾವ ಸಂಬಂಧವಿದ್ದು ಅಮರೇಶ್ವರ ದೇವರು ಸ್ವಾಮೀಜಿಯವರ ಸಂಬಂಧಿಕರೇ ಹೊಸಮಠದ ಜವಾಬ್ದಾರಿ ಹಿಂದೆ ನಿಭಾಯಿಸುತ್ತಿದ್ದರು ಎಂದು ಕಲ್ಬುರ್ಗಿ ತಿಳಿಸಿದರು.

ನಿಯೋಗದಲ್ಲಿ ಮುಖಂಡರಾದ ಅಶೋಕ ನಾಡಗೌಡ, ಶಿವಾನಂದ ಹಿರೇಮಠ, ಕಾಮರಾಜ ಬಿರಾದಾರ, ಗೋಪಿ ಮಡಿವಾಳರ, ಬಸಲಿಂಗಪ್ಪ ರಕ್ಕಸಗಿ, ನಾಗಭೂಷಣ ನಾವದಗಿ, ಅಮರೇಶ ಗೂಳಿ, ರಾಜು ರಾಯಗೊಂಡ, ಪ್ರವೀಣ ನಾಗಠಾಣ, ಪುಟ್ಟು ರಾಯನಗೌಡ, ಸುಧೀರ ನಾವದಗಿ, ಮಹಾಂತೇಶ ಬೂದಿಹಾಳಮಠ, ಮುರುಗೇಶ ಮೋಟಗಿ, ಲೋಹಿತ ನಾಲತವಾಡ, ರವಿ ಅಮರಣ್ಣವರ, ಶರಣಯ್ಯ ಹಿರೇಮಠ ಮೊದಲಾದವರು ಇದ್ದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ