Devotee's declaration to Lord Amareshwar Swamiji to lead the responsibility of the new Math

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ.

ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ ಅವರನ್ನು ಸನ್ಮಾನಿಸಿ ಮುದ್ದೇಬಿಹಾಳ ಭಕ್ತರ ಕೋರಿಕೆಯನ್ನು ಮುಂದಿಟ್ಟಿದ್ದಾರೆ.

ಈ ಕುರಿತು ದೂರವಾಣಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಕಳೆದ ಮೂರು ವರ್ಷದ ಹಿಂದೆ ಹುನಗುಂದಕ್ಕೆ ತೆರಳಿ ಅಮರೇಶ್ವರ ದೇವರನ್ನು ಭೇಟಿ ಮಾಡಿ ನಮ್ಮ ಭಕ್ತರ ಇಚ್ಛೆಯನ್ನು ತಿಳಿಸಿದ್ದೇವು. ಗಚ್ಚಿನಮಠಕ್ಕೆ ಈಗಾಗಲೇ ಪೀಠಾಧಿಕಾರಿಯಾಗಿರುವ ಅವರು ಮುದ್ದೇಬಿಹಾಳದ ಹೊಸಮಠವನ್ನು ಶಾಖಾ ಮಠವನ್ನಾಗಿ ಮಾಡಿಕೊಂಡು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಭಕ್ತರು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾಗಿ ಹೇಳಿದರು.

ಸ್ವಾಮೀಜಿಯವರನ್ನು ಮುದ್ದೇಬಿಹಾಳಕ್ಕೆ ಕರೆತರಲು ಮುದ್ದೇಬಿಹಾಳದ ಭಕ್ತರ ಅಭಿಪ್ರಾಯ ಸಂಗ್ರಹಿಸಲು ಆ.3 ರಂದು ಕಿಲ್ಲಾದ ಹೊಸಮಠದಲ್ಲಿ ಸಭೆ ಕರೆಯಲಾಗಿದ್ದು ಅಂದೇ ಅವರನ್ನು ಮುದ್ದೇಬಿಹಾಳದ ಮಠದ ಉಸ್ತುವಾರಿ, ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಲು ಚರ್ಚೆ ನಡೆಸಿ ಸಂಪೂರ್ಣ ಒಪ್ಪಿಗೆಯನ್ನು ಭಕ್ತರ ಮೂಲಕ ತಿಳಿಸಲಾಗುವುದು. ಇದಕ್ಕೆ ಸ್ವಾಮೀಜಿಯವರು ಅಂದಿನ ಸಭೆಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಕಲ್ಬುರ್ಗಿ ತಿಳಿಸಿದರು.

ಹೊಸಮಠ ಹಾಗೂ ಹುನಗುಂದದ ಗಚ್ಚಿನಮಠಕ್ಕೂ ಅವಿನಾಭಾವ ಸಂಬಂಧವಿದ್ದು ಅಮರೇಶ್ವರ ದೇವರು ಸ್ವಾಮೀಜಿಯವರ ಸಂಬಂಧಿಕರೇ ಹೊಸಮಠದ ಜವಾಬ್ದಾರಿ ಹಿಂದೆ ನಿಭಾಯಿಸುತ್ತಿದ್ದರು ಎಂದು ಕಲ್ಬುರ್ಗಿ ತಿಳಿಸಿದರು.

ನಿಯೋಗದಲ್ಲಿ ಮುಖಂಡರಾದ ಅಶೋಕ ನಾಡಗೌಡ, ಶಿವಾನಂದ ಹಿರೇಮಠ, ಕಾಮರಾಜ ಬಿರಾದಾರ, ಗೋಪಿ ಮಡಿವಾಳರ, ಬಸಲಿಂಗಪ್ಪ ರಕ್ಕಸಗಿ, ನಾಗಭೂಷಣ ನಾವದಗಿ, ಅಮರೇಶ ಗೂಳಿ, ರಾಜು ರಾಯಗೊಂಡ, ಪ್ರವೀಣ ನಾಗಠಾಣ, ಪುಟ್ಟು ರಾಯನಗೌಡ, ಸುಧೀರ ನಾವದಗಿ, ಮಹಾಂತೇಶ ಬೂದಿಹಾಳಮಠ, ಮುರುಗೇಶ ಮೋಟಗಿ, ಲೋಹಿತ ನಾಲತವಾಡ, ರವಿ ಅಮರಣ್ಣವರ, ಶರಣಯ್ಯ ಹಿರೇಮಠ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ