Devotee's declaration to Lord Amareshwar Swamiji to lead the responsibility of the new Math

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ.

ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ ಅವರನ್ನು ಸನ್ಮಾನಿಸಿ ಮುದ್ದೇಬಿಹಾಳ ಭಕ್ತರ ಕೋರಿಕೆಯನ್ನು ಮುಂದಿಟ್ಟಿದ್ದಾರೆ.

ಈ ಕುರಿತು ದೂರವಾಣಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಕಳೆದ ಮೂರು ವರ್ಷದ ಹಿಂದೆ ಹುನಗುಂದಕ್ಕೆ ತೆರಳಿ ಅಮರೇಶ್ವರ ದೇವರನ್ನು ಭೇಟಿ ಮಾಡಿ ನಮ್ಮ ಭಕ್ತರ ಇಚ್ಛೆಯನ್ನು ತಿಳಿಸಿದ್ದೇವು. ಗಚ್ಚಿನಮಠಕ್ಕೆ ಈಗಾಗಲೇ ಪೀಠಾಧಿಕಾರಿಯಾಗಿರುವ ಅವರು ಮುದ್ದೇಬಿಹಾಳದ ಹೊಸಮಠವನ್ನು ಶಾಖಾ ಮಠವನ್ನಾಗಿ ಮಾಡಿಕೊಂಡು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಭಕ್ತರು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾಗಿ ಹೇಳಿದರು.

ಸ್ವಾಮೀಜಿಯವರನ್ನು ಮುದ್ದೇಬಿಹಾಳಕ್ಕೆ ಕರೆತರಲು ಮುದ್ದೇಬಿಹಾಳದ ಭಕ್ತರ ಅಭಿಪ್ರಾಯ ಸಂಗ್ರಹಿಸಲು ಆ.3 ರಂದು ಕಿಲ್ಲಾದ ಹೊಸಮಠದಲ್ಲಿ ಸಭೆ ಕರೆಯಲಾಗಿದ್ದು ಅಂದೇ ಅವರನ್ನು ಮುದ್ದೇಬಿಹಾಳದ ಮಠದ ಉಸ್ತುವಾರಿ, ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಲು ಚರ್ಚೆ ನಡೆಸಿ ಸಂಪೂರ್ಣ ಒಪ್ಪಿಗೆಯನ್ನು ಭಕ್ತರ ಮೂಲಕ ತಿಳಿಸಲಾಗುವುದು. ಇದಕ್ಕೆ ಸ್ವಾಮೀಜಿಯವರು ಅಂದಿನ ಸಭೆಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಕಲ್ಬುರ್ಗಿ ತಿಳಿಸಿದರು.

ಹೊಸಮಠ ಹಾಗೂ ಹುನಗುಂದದ ಗಚ್ಚಿನಮಠಕ್ಕೂ ಅವಿನಾಭಾವ ಸಂಬಂಧವಿದ್ದು ಅಮರೇಶ್ವರ ದೇವರು ಸ್ವಾಮೀಜಿಯವರ ಸಂಬಂಧಿಕರೇ ಹೊಸಮಠದ ಜವಾಬ್ದಾರಿ ಹಿಂದೆ ನಿಭಾಯಿಸುತ್ತಿದ್ದರು ಎಂದು ಕಲ್ಬುರ್ಗಿ ತಿಳಿಸಿದರು.

ನಿಯೋಗದಲ್ಲಿ ಮುಖಂಡರಾದ ಅಶೋಕ ನಾಡಗೌಡ, ಶಿವಾನಂದ ಹಿರೇಮಠ, ಕಾಮರಾಜ ಬಿರಾದಾರ, ಗೋಪಿ ಮಡಿವಾಳರ, ಬಸಲಿಂಗಪ್ಪ ರಕ್ಕಸಗಿ, ನಾಗಭೂಷಣ ನಾವದಗಿ, ಅಮರೇಶ ಗೂಳಿ, ರಾಜು ರಾಯಗೊಂಡ, ಪ್ರವೀಣ ನಾಗಠಾಣ, ಪುಟ್ಟು ರಾಯನಗೌಡ, ಸುಧೀರ ನಾವದಗಿ, ಮಹಾಂತೇಶ ಬೂದಿಹಾಳಮಠ, ಮುರುಗೇಶ ಮೋಟಗಿ, ಲೋಹಿತ ನಾಲತವಾಡ, ರವಿ ಅಮರಣ್ಣವರ, ಶರಣಯ್ಯ ಹಿರೇಮಠ ಮೊದಲಾದವರು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು