Devotee's declaration to Lord Amareshwar Swamiji to lead the responsibility of the new Math

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ.

ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ ಅವರನ್ನು ಸನ್ಮಾನಿಸಿ ಮುದ್ದೇಬಿಹಾಳ ಭಕ್ತರ ಕೋರಿಕೆಯನ್ನು ಮುಂದಿಟ್ಟಿದ್ದಾರೆ.

ಈ ಕುರಿತು ದೂರವಾಣಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಕಳೆದ ಮೂರು ವರ್ಷದ ಹಿಂದೆ ಹುನಗುಂದಕ್ಕೆ ತೆರಳಿ ಅಮರೇಶ್ವರ ದೇವರನ್ನು ಭೇಟಿ ಮಾಡಿ ನಮ್ಮ ಭಕ್ತರ ಇಚ್ಛೆಯನ್ನು ತಿಳಿಸಿದ್ದೇವು. ಗಚ್ಚಿನಮಠಕ್ಕೆ ಈಗಾಗಲೇ ಪೀಠಾಧಿಕಾರಿಯಾಗಿರುವ ಅವರು ಮುದ್ದೇಬಿಹಾಳದ ಹೊಸಮಠವನ್ನು ಶಾಖಾ ಮಠವನ್ನಾಗಿ ಮಾಡಿಕೊಂಡು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಭಕ್ತರು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾಗಿ ಹೇಳಿದರು.

ಸ್ವಾಮೀಜಿಯವರನ್ನು ಮುದ್ದೇಬಿಹಾಳಕ್ಕೆ ಕರೆತರಲು ಮುದ್ದೇಬಿಹಾಳದ ಭಕ್ತರ ಅಭಿಪ್ರಾಯ ಸಂಗ್ರಹಿಸಲು ಆ.3 ರಂದು ಕಿಲ್ಲಾದ ಹೊಸಮಠದಲ್ಲಿ ಸಭೆ ಕರೆಯಲಾಗಿದ್ದು ಅಂದೇ ಅವರನ್ನು ಮುದ್ದೇಬಿಹಾಳದ ಮಠದ ಉಸ್ತುವಾರಿ, ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಲು ಚರ್ಚೆ ನಡೆಸಿ ಸಂಪೂರ್ಣ ಒಪ್ಪಿಗೆಯನ್ನು ಭಕ್ತರ ಮೂಲಕ ತಿಳಿಸಲಾಗುವುದು. ಇದಕ್ಕೆ ಸ್ವಾಮೀಜಿಯವರು ಅಂದಿನ ಸಭೆಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಕಲ್ಬುರ್ಗಿ ತಿಳಿಸಿದರು.

ಹೊಸಮಠ ಹಾಗೂ ಹುನಗುಂದದ ಗಚ್ಚಿನಮಠಕ್ಕೂ ಅವಿನಾಭಾವ ಸಂಬಂಧವಿದ್ದು ಅಮರೇಶ್ವರ ದೇವರು ಸ್ವಾಮೀಜಿಯವರ ಸಂಬಂಧಿಕರೇ ಹೊಸಮಠದ ಜವಾಬ್ದಾರಿ ಹಿಂದೆ ನಿಭಾಯಿಸುತ್ತಿದ್ದರು ಎಂದು ಕಲ್ಬುರ್ಗಿ ತಿಳಿಸಿದರು.

ನಿಯೋಗದಲ್ಲಿ ಮುಖಂಡರಾದ ಅಶೋಕ ನಾಡಗೌಡ, ಶಿವಾನಂದ ಹಿರೇಮಠ, ಕಾಮರಾಜ ಬಿರಾದಾರ, ಗೋಪಿ ಮಡಿವಾಳರ, ಬಸಲಿಂಗಪ್ಪ ರಕ್ಕಸಗಿ, ನಾಗಭೂಷಣ ನಾವದಗಿ, ಅಮರೇಶ ಗೂಳಿ, ರಾಜು ರಾಯಗೊಂಡ, ಪ್ರವೀಣ ನಾಗಠಾಣ, ಪುಟ್ಟು ರಾಯನಗೌಡ, ಸುಧೀರ ನಾವದಗಿ, ಮಹಾಂತೇಶ ಬೂದಿಹಾಳಮಠ, ಮುರುಗೇಶ ಮೋಟಗಿ, ಲೋಹಿತ ನಾಲತವಾಡ, ರವಿ ಅಮರಣ್ಣವರ, ಶರಣಯ್ಯ ಹಿರೇಮಠ ಮೊದಲಾದವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ