Dharamsabha in Jattagi, mass marriage: Mass marriages are a model for society

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಜಟ್ಟಗಿ ಬೆಳ್ಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರೆ ದೇಣಿಗೆ ಸಂಗ್ರಹಿಸಿ ಇಂತಹ ಧಾರ್ಮಿಕ ಕಾರ್ಯ ನಡೆಸುತ್ತಿರುವುದು ಸಮಾಜದಲ್ಲಿರುವ ಉಳ್ಳವರಿಗೆ ಮಾದರಿಯಾಗಿದೆ ಎಂದರು.

ಜಾತ್ರಾ ಕಮೀಟಿ ಅಧ್ಯಕ್ಷ ಬಿ.ಕೆ.ಬಿರಾದಾರ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ನಾವು ಮಾಡುವ ಜಾತ್ರೆಗಳು ಮತ್ತೊಬ್ಬರಿಗೆ ಭಾರವಾಗದಂತೆ ಇರಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳನ್ನು ಜಾತ್ರೆಯ ಕಾರ್ಯಕ್ರಮಗಳಲ್ಲಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ, ಗೊಳಸಾರಮಠದ ಅಭಿನವ ಪುಂಡಲೀಕ ಸ್ವಾಮೀಜಿ, ಸೀತಿಮನಿಯ ವೈಶಿಷ್ಟ ಸ್ವಾಮೀಜಿ, ಜಟ್ಟಗಿಯ ಸೋಮಲಿಂಗ ಸ್ವಾಮೀಜಿ, ಬಾಗಲಕೋಟೆ ಶಾಸಕ ಎಚ್.ವಾಯ್.ಮೇಟಿ, ಹುಲ್ಲೂರು ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ, ಮಾಜಿ ಅಧ್ಯಕ್ಷ ಹಣಮಂತಗೌಡ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷೆ ಚೆನ್ನಮ್ಮ ಗೌಡರ, ಗ್ರಾಪಂ ಸದಸ್ಯರಾದ ಭೀಮಪ್ಪ ಮಾದರ, ಶಿವಾನಂದ ಲಮಾಣಿ, ವಾಯ್. ಎಚ್. ವಿಜಯಕರ್, ಬಿ. ಎಚ್. ಶಿರೋಳ, ಕಿರಣ ಮದರಿ, ವಾಯ್. ಕೆ. ಹಳೇಮನಿ, ಎಂ. ಎಚ್. ಚನ್ನಿ ಮೊದಲಾದವರು ಇದ್ದರು. ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ