Dharamsabha in Jattagi, mass marriage: Mass marriages are a model for society

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಜಟ್ಟಗಿ ಬೆಳ್ಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರೆ ದೇಣಿಗೆ ಸಂಗ್ರಹಿಸಿ ಇಂತಹ ಧಾರ್ಮಿಕ ಕಾರ್ಯ ನಡೆಸುತ್ತಿರುವುದು ಸಮಾಜದಲ್ಲಿರುವ ಉಳ್ಳವರಿಗೆ ಮಾದರಿಯಾಗಿದೆ ಎಂದರು.

ಜಾತ್ರಾ ಕಮೀಟಿ ಅಧ್ಯಕ್ಷ ಬಿ.ಕೆ.ಬಿರಾದಾರ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ನಾವು ಮಾಡುವ ಜಾತ್ರೆಗಳು ಮತ್ತೊಬ್ಬರಿಗೆ ಭಾರವಾಗದಂತೆ ಇರಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳನ್ನು ಜಾತ್ರೆಯ ಕಾರ್ಯಕ್ರಮಗಳಲ್ಲಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ, ಗೊಳಸಾರಮಠದ ಅಭಿನವ ಪುಂಡಲೀಕ ಸ್ವಾಮೀಜಿ, ಸೀತಿಮನಿಯ ವೈಶಿಷ್ಟ ಸ್ವಾಮೀಜಿ, ಜಟ್ಟಗಿಯ ಸೋಮಲಿಂಗ ಸ್ವಾಮೀಜಿ, ಬಾಗಲಕೋಟೆ ಶಾಸಕ ಎಚ್.ವಾಯ್.ಮೇಟಿ, ಹುಲ್ಲೂರು ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ, ಮಾಜಿ ಅಧ್ಯಕ್ಷ ಹಣಮಂತಗೌಡ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷೆ ಚೆನ್ನಮ್ಮ ಗೌಡರ, ಗ್ರಾಪಂ ಸದಸ್ಯರಾದ ಭೀಮಪ್ಪ ಮಾದರ, ಶಿವಾನಂದ ಲಮಾಣಿ, ವಾಯ್. ಎಚ್. ವಿಜಯಕರ್, ಬಿ. ಎಚ್. ಶಿರೋಳ, ಕಿರಣ ಮದರಿ, ವಾಯ್. ಕೆ. ಹಳೇಮನಿ, ಎಂ. ಎಚ್. ಚನ್ನಿ ಮೊದಲಾದವರು ಇದ್ದರು. ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ