Dharamsabha in Jattagi, mass marriage: Mass marriages are a model for society

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಜಟ್ಟಗಿ ಬೆಳ್ಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರೆ ದೇಣಿಗೆ ಸಂಗ್ರಹಿಸಿ ಇಂತಹ ಧಾರ್ಮಿಕ ಕಾರ್ಯ ನಡೆಸುತ್ತಿರುವುದು ಸಮಾಜದಲ್ಲಿರುವ ಉಳ್ಳವರಿಗೆ ಮಾದರಿಯಾಗಿದೆ ಎಂದರು.

ಜಾತ್ರಾ ಕಮೀಟಿ ಅಧ್ಯಕ್ಷ ಬಿ.ಕೆ.ಬಿರಾದಾರ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ನಾವು ಮಾಡುವ ಜಾತ್ರೆಗಳು ಮತ್ತೊಬ್ಬರಿಗೆ ಭಾರವಾಗದಂತೆ ಇರಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳನ್ನು ಜಾತ್ರೆಯ ಕಾರ್ಯಕ್ರಮಗಳಲ್ಲಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ, ಗೊಳಸಾರಮಠದ ಅಭಿನವ ಪುಂಡಲೀಕ ಸ್ವಾಮೀಜಿ, ಸೀತಿಮನಿಯ ವೈಶಿಷ್ಟ ಸ್ವಾಮೀಜಿ, ಜಟ್ಟಗಿಯ ಸೋಮಲಿಂಗ ಸ್ವಾಮೀಜಿ, ಬಾಗಲಕೋಟೆ ಶಾಸಕ ಎಚ್.ವಾಯ್.ಮೇಟಿ, ಹುಲ್ಲೂರು ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ, ಮಾಜಿ ಅಧ್ಯಕ್ಷ ಹಣಮಂತಗೌಡ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷೆ ಚೆನ್ನಮ್ಮ ಗೌಡರ, ಗ್ರಾಪಂ ಸದಸ್ಯರಾದ ಭೀಮಪ್ಪ ಮಾದರ, ಶಿವಾನಂದ ಲಮಾಣಿ, ವಾಯ್. ಎಚ್. ವಿಜಯಕರ್, ಬಿ. ಎಚ್. ಶಿರೋಳ, ಕಿರಣ ಮದರಿ, ವಾಯ್. ಕೆ. ಹಳೇಮನಿ, ಎಂ. ಎಚ್. ಚನ್ನಿ ಮೊದಲಾದವರು ಇದ್ದರು. ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ