Dharamsabha in Jattagi, mass marriage: Mass marriages are a model for society

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಜಟ್ಟಗಿ ಬೆಳ್ಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರೆ ದೇಣಿಗೆ ಸಂಗ್ರಹಿಸಿ ಇಂತಹ ಧಾರ್ಮಿಕ ಕಾರ್ಯ ನಡೆಸುತ್ತಿರುವುದು ಸಮಾಜದಲ್ಲಿರುವ ಉಳ್ಳವರಿಗೆ ಮಾದರಿಯಾಗಿದೆ ಎಂದರು.

ಜಾತ್ರಾ ಕಮೀಟಿ ಅಧ್ಯಕ್ಷ ಬಿ.ಕೆ.ಬಿರಾದಾರ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ನಾವು ಮಾಡುವ ಜಾತ್ರೆಗಳು ಮತ್ತೊಬ್ಬರಿಗೆ ಭಾರವಾಗದಂತೆ ಇರಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳನ್ನು ಜಾತ್ರೆಯ ಕಾರ್ಯಕ್ರಮಗಳಲ್ಲಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ, ಗೊಳಸಾರಮಠದ ಅಭಿನವ ಪುಂಡಲೀಕ ಸ್ವಾಮೀಜಿ, ಸೀತಿಮನಿಯ ವೈಶಿಷ್ಟ ಸ್ವಾಮೀಜಿ, ಜಟ್ಟಗಿಯ ಸೋಮಲಿಂಗ ಸ್ವಾಮೀಜಿ, ಬಾಗಲಕೋಟೆ ಶಾಸಕ ಎಚ್.ವಾಯ್.ಮೇಟಿ, ಹುಲ್ಲೂರು ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ, ಮಾಜಿ ಅಧ್ಯಕ್ಷ ಹಣಮಂತಗೌಡ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷೆ ಚೆನ್ನಮ್ಮ ಗೌಡರ, ಗ್ರಾಪಂ ಸದಸ್ಯರಾದ ಭೀಮಪ್ಪ ಮಾದರ, ಶಿವಾನಂದ ಲಮಾಣಿ, ವಾಯ್. ಎಚ್. ವಿಜಯಕರ್, ಬಿ. ಎಚ್. ಶಿರೋಳ, ಕಿರಣ ಮದರಿ, ವಾಯ್. ಕೆ. ಹಳೇಮನಿ, ಎಂ. ಎಚ್. ಚನ್ನಿ ಮೊದಲಾದವರು ಇದ್ದರು. ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ