Dharna in front of Muddebihal BEO office: One week deadline for the start of century-old school

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ : ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ ಸರ್ಕಾರಿ ಉರ್ದು ಶಾಲೆಯನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿ ಇಂದು ಮುದ್ದೇಬಿಹಾಳದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಎದುರಿಗೆ ಕರ್ನಾಟಕ ಮುಸ್ಲಿಂ ಕೌನ್ಸಿಲ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಕೂಟದ ಸಹಯೋಗದಲ್ಲಿ ಬುಧವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕೆ.ಎಂ.ಸಿ ಮುಖಂಡ ಕೆ.ಎಂ.ರಿಸಾಲ್ದಾರ ಮಾತನಾಡಿ, ಈಗಾಗಲೇ ಈ ಶಾಲೆಯನ್ನು ಡೈಸ್ ಕೋಡ ನೆಪದಲ್ಲಿ ಆರಂಭಿಸಲಾಗುತ್ತಿಲ್ಲ. ಜೊತೆಗೆ ಈ ಶಾಲೆಯನ್ನು ಪುರಸಭೆ ಸುಪರ್ದಿಗೆ ಹಸ್ತಾಂತರಿಸಲಾಗುತ್ತಿದೆ. ಇದು ಕಾನೂನು ಬಾಹಿರವಾಗಿದ್ದು, ಕೂಡಲೇ ಸರ್ಕಾರ ಇದನ್ನು ತಡೆದು, ಇಲ್ಲಿ ಪುನಃ ಉರ್ದು ಶಾಲೆ ಆರಂಭಿಸಬೇಕು. ಈ ಜಾಗವನ್ನು ಶಾಲೆಗಾಗಿಯೇ ದಾನ ಮಾಡಿದ್ದಾರೆ. ಹಾಗಾಗಿ ಈ ಜಾಗ ಶಾಲೆಗೆ ಸೀಮಿತವಾಗಿದ್ದು, ಶಾಲೆ ಶಾಲೆಯಾಗಿಯೇ ಉಳಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ ಅವರು, ನಾನು ಈಗಾಗಲೆ ಈ ಶಾಲೆ ಆರಂಭಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ ಎನ್ನುತ್ತಿದ್ದಂತೆ ಆಕ್ರೋಶಗೊಂಡ ಹೋರಾಟಗಾರರು ಈ ಶಾಲೆ ಸ್ಥಳಾಂತರವಾಗುತ್ತಿದ್ದರೂ ಮೌನ ವಹಿಸಿದ್ದೇಕೆ ಎಂದು ತರಾಟೆಗೆ ತೆಗೆದುಕೊಂಡರು.

ಆಗ ಸ್ಥಳದಲ್ಲಿಯೇ ಬಿಇಓ ಅವರು ಡಿಡಿಪಿಐ ಅವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಜರುಗಿಸುವ ಭರವಸೆ ಮೇರೆಗೆ ಹೋರಾಟಗಾರರು ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಒಂದು ವಾರದೊಳಗೆ ಶಾಲೆಯನ್ನು ಆರಂಭಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಪೃತ್ತರಾಗಬೇಕು, ಜೊತೆಗೆ ಡಿಡಿಪಿಐ ಅವರು ತಿಳಿಸಿದ ಹಾಗೇ ಶಾಲೆ ಆರಂಭಕ್ಕೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಳಿಸಬೇಕು ಎಂದು ತಿಳಿಸಿದರು.

ನಿವಾಸಿಗಳಾದ ಎಲ್.ಎಮ್.ನಾಯ್ಕೋಡಿ, ದಾವಲ ಸಾತಿಹಾಳ, ತೆಗ್ಗಿ ಹಾಜಿ, ರಿಯಾಜ್ ಮುಲ್ಲಾ, ಹುಸೇನಬಾಷಾ ಮುಲ್ಲಾ, ಇಸ್ಮಾಯಿಲ್ ಅವಟಿ, ಹೆಚ್. ಆರ್. ಬಾಗವಾನ, ಅಶ್ಫಾಕ್ ಮುಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ