Dharna in front of Muddebihal BEO office: One week deadline for the start of century-old school

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ : ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ ಸರ್ಕಾರಿ ಉರ್ದು ಶಾಲೆಯನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿ ಇಂದು ಮುದ್ದೇಬಿಹಾಳದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಎದುರಿಗೆ ಕರ್ನಾಟಕ ಮುಸ್ಲಿಂ ಕೌನ್ಸಿಲ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಕೂಟದ ಸಹಯೋಗದಲ್ಲಿ ಬುಧವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕೆ.ಎಂ.ಸಿ ಮುಖಂಡ ಕೆ.ಎಂ.ರಿಸಾಲ್ದಾರ ಮಾತನಾಡಿ, ಈಗಾಗಲೇ ಈ ಶಾಲೆಯನ್ನು ಡೈಸ್ ಕೋಡ ನೆಪದಲ್ಲಿ ಆರಂಭಿಸಲಾಗುತ್ತಿಲ್ಲ. ಜೊತೆಗೆ ಈ ಶಾಲೆಯನ್ನು ಪುರಸಭೆ ಸುಪರ್ದಿಗೆ ಹಸ್ತಾಂತರಿಸಲಾಗುತ್ತಿದೆ. ಇದು ಕಾನೂನು ಬಾಹಿರವಾಗಿದ್ದು, ಕೂಡಲೇ ಸರ್ಕಾರ ಇದನ್ನು ತಡೆದು, ಇಲ್ಲಿ ಪುನಃ ಉರ್ದು ಶಾಲೆ ಆರಂಭಿಸಬೇಕು. ಈ ಜಾಗವನ್ನು ಶಾಲೆಗಾಗಿಯೇ ದಾನ ಮಾಡಿದ್ದಾರೆ. ಹಾಗಾಗಿ ಈ ಜಾಗ ಶಾಲೆಗೆ ಸೀಮಿತವಾಗಿದ್ದು, ಶಾಲೆ ಶಾಲೆಯಾಗಿಯೇ ಉಳಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ ಅವರು, ನಾನು ಈಗಾಗಲೆ ಈ ಶಾಲೆ ಆರಂಭಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ ಎನ್ನುತ್ತಿದ್ದಂತೆ ಆಕ್ರೋಶಗೊಂಡ ಹೋರಾಟಗಾರರು ಈ ಶಾಲೆ ಸ್ಥಳಾಂತರವಾಗುತ್ತಿದ್ದರೂ ಮೌನ ವಹಿಸಿದ್ದೇಕೆ ಎಂದು ತರಾಟೆಗೆ ತೆಗೆದುಕೊಂಡರು.

ಆಗ ಸ್ಥಳದಲ್ಲಿಯೇ ಬಿಇಓ ಅವರು ಡಿಡಿಪಿಐ ಅವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಜರುಗಿಸುವ ಭರವಸೆ ಮೇರೆಗೆ ಹೋರಾಟಗಾರರು ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಒಂದು ವಾರದೊಳಗೆ ಶಾಲೆಯನ್ನು ಆರಂಭಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಪೃತ್ತರಾಗಬೇಕು, ಜೊತೆಗೆ ಡಿಡಿಪಿಐ ಅವರು ತಿಳಿಸಿದ ಹಾಗೇ ಶಾಲೆ ಆರಂಭಕ್ಕೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಳಿಸಬೇಕು ಎಂದು ತಿಳಿಸಿದರು.

ನಿವಾಸಿಗಳಾದ ಎಲ್.ಎಮ್.ನಾಯ್ಕೋಡಿ, ದಾವಲ ಸಾತಿಹಾಳ, ತೆಗ್ಗಿ ಹಾಜಿ, ರಿಯಾಜ್ ಮುಲ್ಲಾ, ಹುಸೇನಬಾಷಾ ಮುಲ್ಲಾ, ಇಸ್ಮಾಯಿಲ್ ಅವಟಿ, ಹೆಚ್. ಆರ್. ಬಾಗವಾನ, ಅಶ್ಫಾಕ್ ಮುಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ