Dharna in front of TAPAM office: TAPAM EO issued notice to municipal chief

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದವನ್ನು ಹುಟ್ಟು ಹಾಕಿದ್ದು ದಲಿತಪರ ಸಂಘಟನೆಯವರು ಗುರುವಾರ ತಾಪಂ ಕಚೇರಿ ಎದುರಿಗೆ ಧರಣಿ ನಡೆಸಿದ್ದು ವಸತಿಗೃಹಗಳನ್ನು ನೆಲಸಮ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಾಪಂ ಕಚೇರಿ ಆವರಣದಲ್ಲಿ ನಡೆದ ಧರಣಿ ಸ್ಥಳದಲ್ಲಿ ಹೋರಾಟಗಾರರನ್ನು ಭೇಟಿ ಮಾಡಿದ ತಾಪಂ ಇಒ ನಿಂಗಪ್ಪ ಮಸಳಿ, ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ಹೆಸರಿನಲ್ಲಿ ಬರೆದಿರುವ ನೋಟಿಸ್‌ನ್ನು ತಾಪಂ ಇಒ ಹೋರಾಟಗಾರರಿಗೆ ಹಸ್ತಾಂತರ ಮಾಡುವ ಮೂಲಕ ತಾತ್ಕಾಲಿಕವಾಗಿ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸುವ ಪ್ರಯತ್ನ ಮಾಡಿದ್ದಾರೆ.

ನೋಟಿಸಿನಲ್ಲೇದೆ ?: ತಾಪಂ ಇಒ ನಿಂಗಪ್ಪ ಮಸಳಿ ಜಾರಿ ಮಾಡಿರುವ ನೋಟಿಸಿನಲ್ಲಿ, ದಿನಾಂಕ 30-5-2025ರಿಂದ 30-6-2025ರವರೆಗೆ ಜರುಗಿದ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ಜಾತ್ರೆ ನಿಮಿತ್ಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಬಂಧಿಸಿದ ತಾಲ್ಲೂಕ ಪಂಚಾಯತ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿರುತ್ತೀರಿ. ಅಪಾರ ಪ್ರಮಾಣದ ಬೆಲೆ ಬಾಳುವ ಆಸ್ತಿಯನ್ನು ಹಾನಿ ಮಾಡಿದ್ದೀರಿ. ಸದರಿ ಸ್ಥಳವನ್ನು ಸಮುಚಿತ ಮಾರ್ಗದಲ್ಲಿ ಅನುಮತಿ ಪಡೆಯದೇ ಗ್ರಾಮದೇವತಾ ಜಾತ್ರಾ ಕಾರ್ಯಕ್ರಮಕ್ಕೆ ಅನುಕೂಲವಾಗುವಂತೆ ಬಳಸಿಕೊಂಡಿದ್ದಲ್ಲದೇ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿ ಅಪಾರ ಪ್ರಮಾಣದ ಸರಕಾರಿ ಆಸ್ತಿಯನ್ನು ಹಾನಿ ಮಾಡಿದ್ದೀರಿ.ನಮ್ಮ ಗಮನಕ್ಕೆ ತರದೇ ಮನರಂಜನಾ ಕಾರ್ಯಕ್ರಮಕ್ಕಾಗಿ ಸದರ ಸ್ಥಳವನ್ನು ವಿರೂಪಗೊಳಿಸುವ ಕೆಡವಿ ಹಾಕುವ ಪೂರ್ವದಲ್ಲಿ ಅಥವಾ ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಪರ್ಕಿಸಿಲ್ಲವೇಕೆ? ನಮ್ಮ ಗಮನಕ್ಕೆ ತಂದಿಲ್ಲವೇಕೆ? ಪತ್ರವ್ಯವಹಾರ ಮಾಡಿಲ್ಲವೇಕೆ? ಎಂಬುದರ ಬಗ್ಗೆ ಏಳು ದಿನಗಳಲ್ಲಿ ಸ್ಪಷ್ಟ ಲಿಖಿತ ವಿವರಣೆ ನೀಡಲು ತಿಳಿಸಿದ್ದು ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರಾದ ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ಆನಂದ ಮುದೂರ, ಬಸವರಾಜ ಚಲವಾದಿ, ಸಿದ್ದು ಚಲವಾದಿ, ರೇವಣಸಿದ್ದಪ್ಪ ನಾಯಕ ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.