Dharna in front of TAPAM office: TAPAM EO issued notice to municipal chief

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದವನ್ನು ಹುಟ್ಟು ಹಾಕಿದ್ದು ದಲಿತಪರ ಸಂಘಟನೆಯವರು ಗುರುವಾರ ತಾಪಂ ಕಚೇರಿ ಎದುರಿಗೆ ಧರಣಿ ನಡೆಸಿದ್ದು ವಸತಿಗೃಹಗಳನ್ನು ನೆಲಸಮ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಾಪಂ ಕಚೇರಿ ಆವರಣದಲ್ಲಿ ನಡೆದ ಧರಣಿ ಸ್ಥಳದಲ್ಲಿ ಹೋರಾಟಗಾರರನ್ನು ಭೇಟಿ ಮಾಡಿದ ತಾಪಂ ಇಒ ನಿಂಗಪ್ಪ ಮಸಳಿ, ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ಹೆಸರಿನಲ್ಲಿ ಬರೆದಿರುವ ನೋಟಿಸ್‌ನ್ನು ತಾಪಂ ಇಒ ಹೋರಾಟಗಾರರಿಗೆ ಹಸ್ತಾಂತರ ಮಾಡುವ ಮೂಲಕ ತಾತ್ಕಾಲಿಕವಾಗಿ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸುವ ಪ್ರಯತ್ನ ಮಾಡಿದ್ದಾರೆ.

ನೋಟಿಸಿನಲ್ಲೇದೆ ?: ತಾಪಂ ಇಒ ನಿಂಗಪ್ಪ ಮಸಳಿ ಜಾರಿ ಮಾಡಿರುವ ನೋಟಿಸಿನಲ್ಲಿ, ದಿನಾಂಕ 30-5-2025ರಿಂದ 30-6-2025ರವರೆಗೆ ಜರುಗಿದ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ಜಾತ್ರೆ ನಿಮಿತ್ಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಬಂಧಿಸಿದ ತಾಲ್ಲೂಕ ಪಂಚಾಯತ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿರುತ್ತೀರಿ. ಅಪಾರ ಪ್ರಮಾಣದ ಬೆಲೆ ಬಾಳುವ ಆಸ್ತಿಯನ್ನು ಹಾನಿ ಮಾಡಿದ್ದೀರಿ. ಸದರಿ ಸ್ಥಳವನ್ನು ಸಮುಚಿತ ಮಾರ್ಗದಲ್ಲಿ ಅನುಮತಿ ಪಡೆಯದೇ ಗ್ರಾಮದೇವತಾ ಜಾತ್ರಾ ಕಾರ್ಯಕ್ರಮಕ್ಕೆ ಅನುಕೂಲವಾಗುವಂತೆ ಬಳಸಿಕೊಂಡಿದ್ದಲ್ಲದೇ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿ ಅಪಾರ ಪ್ರಮಾಣದ ಸರಕಾರಿ ಆಸ್ತಿಯನ್ನು ಹಾನಿ ಮಾಡಿದ್ದೀರಿ.ನಮ್ಮ ಗಮನಕ್ಕೆ ತರದೇ ಮನರಂಜನಾ ಕಾರ್ಯಕ್ರಮಕ್ಕಾಗಿ ಸದರ ಸ್ಥಳವನ್ನು ವಿರೂಪಗೊಳಿಸುವ ಕೆಡವಿ ಹಾಕುವ ಪೂರ್ವದಲ್ಲಿ ಅಥವಾ ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಪರ್ಕಿಸಿಲ್ಲವೇಕೆ? ನಮ್ಮ ಗಮನಕ್ಕೆ ತಂದಿಲ್ಲವೇಕೆ? ಪತ್ರವ್ಯವಹಾರ ಮಾಡಿಲ್ಲವೇಕೆ? ಎಂಬುದರ ಬಗ್ಗೆ ಏಳು ದಿನಗಳಲ್ಲಿ ಸ್ಪಷ್ಟ ಲಿಖಿತ ವಿವರಣೆ ನೀಡಲು ತಿಳಿಸಿದ್ದು ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರಾದ ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ಆನಂದ ಮುದೂರ, ಬಸವರಾಜ ಚಲವಾದಿ, ಸಿದ್ದು ಚಲವಾದಿ, ರೇವಣಸಿದ್ದಪ್ಪ ನಾಯಕ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ