Dharwad: District in-charge minister Santosh S Lad visited the areas of continuous rain and crop damage

ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ, ಆಗಸ್ಟ್‌ 23: “ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ‌ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ ವಿಮೆ ಕಂಪನಿ ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದು. ವಿಮಾ ಕಂಪನಿಯ ಕೆಲವು ನಿಯಮ‌ ಬದಲಾವಣೆ ಬಗ್ಗೆ ಸಭೆ ನಡೆಸಲಾಗುವುದು” ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು.

ಮಳೆಯಿಂದ ಹಾನಿಯಾದ ನವಲಗುಂದ ಪಟ್ಟಣದ ಮನೆಗಳು, ನಾಯಕನೂರ ಗ್ರಾಮದ ಹೊಲಗಳಲ್ಲಿನ ಹೆಸರು ಮತ್ತು ಈರುಳ್ಳಿ ಬೆಳೆಯನ್ನು ಸಚಿವರು ಇಂದು ಪರಿಶೀಲಿಸಿದರು.

ಅಣ್ಣಿಗೇರಿ ತಾಲೂಕಿನ ಮಣಕವಾಡ, ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಾನಿಯಾಗಿರುವುದನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿಯೂ ಹಾನಿಗೊಳಗಾಗಿರುವ ಹೆಸರು, ಉದ್ದು, ಶೇಂಗಾ, ಈರುಳ್ಳಿ ಹಾಗೂ ಇತರ ಬೆಳೆಗಳ ಹಾನಿ ಪ್ರದೇಶಗಳನ್ನು ಪರಿವೀಕ್ಷಿಸಲಾಯಿತು. ಜೊತೆಗೆ ಮಳೆ ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ತಡಹಾಳ ಗ್ರಾಮದ ಸೇತುವೆಯನ್ನು ಇದೇ ವೇಳೆ ವೀಕ್ಷಿಸಿದರು.

ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಭಾರಿ ಮಳೆಗೆ ಹೆಚ್ಚಿನ ಬೆಳೆಯಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗಿದೆ. ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿದ್ದು, ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದರಿಂದ ಬೆಳೆಗಳು ಕೊಳೆಯಲಾರಂಭಿಸಿವೆ. ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನವಲಗುಂದ ಪಟ್ಟಣದ ಗುಡ್ಡದಕೇರಿ ಓಣಿಯಲ್ಲಿನ ದ್ಯಾಮವ್ವ ಬಣ್ಣೆಣ್ಣನವರ ಎಂಬವರ ಮನೆ ಮಳೆಗೆ ಸಂಪೂರ್ಣ ಹಾನಿಯಾಗಿತ್ತು. ಬಿದ್ದ ಮನೆ ವೀಕ್ಷಣೆ ಮಾಡಿದ ಸಚಿವ ಲಾಡ್ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಸಚಿವರಿಗೆ ಗ್ರಾಮಸ್ಥರ ಅಳಲು: ನವಲಗುಂದ ಭಾಗದಲ್ಲಿ ಹೆಸರು, ಈರುಳ್ಳಿ ಬೆಳೆ ಕಳೆದುಕೊಂಡು ಸಂಕಷ್ಟ ಎದುರಿಸುತ್ತಿರುವ ರೈತರು ಸಚಿವರ ಮುಂದೆ ಅಳಲನ್ನು ತೋಡಿಕೊಂಡರು. “ಸಾಲಸೋಲ ಮಾಡಿ ಬೆಳೆ ಹಾಕಿದ್ದೆವು. ಈಗ ನೋಡಿದರೆ ಮಳೆಯಿಂದ ಬೆಳೆ ಸಂಪೂರ್ಣ ಹಾನಿಯಾಗಿವೆ. ಸರ್ಕಾರದಿಂದ ಪರಿಹಾರ ಕೊಡಿಸಬೇಕು” ಎಂದು ಮನವಿ ಮಾಡಿದರು.

ತಡಹಾಳ ಗ್ರಾಮದ ಸೇತುವೆ ಪರಿಶೀಲನೆ: ತಡಹಾಳ ಬಳಿಯ ಬೆಣ್ಣೆಹಳ್ಳದಿಂದ ಉಂಟಾಗಿರುವ ನಷ್ಟದ ಕುರಿತು ಮಾತನಾಡಿದ ಸಚಿವರು, ಸೇತುವೆ ಹಳೆಯದಾಗಿದೆ. ಇದನ್ನು ಮೇಲ್ದರ್ಜೆಗೇರಿಸಲಾಗುವುದು. ಸದ್ಯ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಬೆಣ್ಣೆಹಳ್ಳಕ್ಕೆ ಶಾಶ್ವತ ಸೇತುವೆ ನಿರ್ಮಾಣ ಮಾಡುವ ಕುರಿತು ಭರವಸೆ ನೀಡಿದರು.

ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಸೇತುವೆ ಹಾನಿಯಾಗಿದ್ದರಿಂದ ನರಗುಂದ ಹಾಗೂ ನವಲಗುಂದ ತಾಲೂಕಿನ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿತ್ತು.
ಕಳೆದ ಒಂದು ತಿಂಗಳ ಹಿಂದಷ್ಟೇ ಸೇತುವೆ ದುರಸ್ತಿ ಮಾಡಲಾಗಿತ್ತು. ಈ ಮುಂಚೆಯೂ ಸೇತುವೆ ಇದೇ ರೀತಿ ಕೊಚ್ಚಿಕೊಂಡು ಹೋಗಿತ್ತು. ಕೊಚ್ಚಿ ಹೋದ ಸೇತುವೆಯಿಂದ ಜನರಿಗೆ ಸಂಕಷ್ಟ ಎದುರಾಗಿತ್ತು.

ಭೇಟಿ ವೇಳೆ ಸಚಿವರಿಗೆ ನವಲಗುಂದ ಕ್ಷೇತ್ರದ ಶಾಸಕ ಎನ್. ಹೆಚ್. ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಾಥ್ ನೀಡಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ